ಗಲಭೆ ಕೋರರನ್ನು ಮಟ್ಟ ಹಾಕಿ ಪೊಲೀಸರಿಗೆ ದೆಹಲಿ ಹೈಕೋರ್ಟ್ ಖಡಕ್ ಎಚ್ಚರಿಕೆ
ನವದೆಹಲಿ, ಫೆ 26 : ದೆಹಲಿ ಯಲ್ಲಿನ ಹಿಂಸಾಚಾರ ತಡೆಗಟ್ಟಲು ಸ್ವಯಂಪ್ರೇರಿತರಾಗಿ ಅಗತ್ಯ ಕ್ರಮ ಕೈಗೊಳ್ಳಿ ಎಂದು ದೆಹಲಿ ಕೋರ್ಟ್ ಪೊಲೀಸರಿಗೆ ಖಡಕ್ ನಿರ್ದೇಶನ ನೀಡಿದೆ.
ಪೌರತ್ವ ತಿದ್ದುಪಡಿ ಕಾಯ್ದೆಯ (ಸಿಎಎ) ಪರ-ವಿರುದ್ಧದ ಪ್ರತಿಭಟನೆಯಲ್ಲಿ ಈಶಾನ್ಯ ದೆಹಲಿಯಲ್ಲಿ ಉಂಟಾಗಿರುವ ಹಿಂಸಾಚಾರ ಸಂಬಂಧ ಕೋರ್ಟ್ ಇದೇ ಸಮಯದಲ್ಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.
ದೆಹಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆ, ಸಂತ್ರಸ್ತರಿಗೆ ಪರಿಹಾರ ಮತ್ತು ಪ್ರಚೋದನಾಕಾರಿ ಭಾಷಣ ಮಾಡಿದ ಅನೇಕ ರಾಜಕೀಯ ನಾಯಕರನ್ನು ಬಂಧನ ಕುರಿತಂತೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಮನವಿಯ ವಿಚಾರಣೆ ನಡೆಸಿದ ಕೋರ್ಟ್, ದೆಹಲಿ ಪೊಲೀಸ್ ಕಮಿಷನರ್ಗೂ ನೋಟಿಸ್ ಜಾರಿ ಮಾಡಿದೆ.
ಸಿಎಎ ಕುರಿತಾಗಿ ಭುಗಿಲೆದ್ದ ಈಶಾನ್ಯ ದೆಹಲಿಯ ಹಿಂಸಾಚಾರ ಕುರಿತಂತೆ ಮಧ್ಯಾಹ್ನ ದೊಳಗೆ ಪ್ರತಿಕ್ರಿಯೆ ಕೊಡಬೇಕು ಎಂದು ಗಡುವು ಹಾಕಿದೆ ಗಳಬೆ ಮತ್ತು ದೊಂಬಿ, ಲೂಟಿಯಲ್ಲಿ ತೊಡಗಿರುವವರನ್ನು ಹತ್ತಿಕ್ಕಲು ಪೊಲೀಸರು ಯಾವ ಆದೇಶಕ್ಕೆ ಕಾಯದೆ ಸ್ವಯಂ ಕಾನೂನು ಕ್ರಮ ಜರುಗಿಸಬೇಕು ಎಂದೂ ಕೋರ್ಟ್ ಖಡಕ್ಕಾಗಿ ಹೇಳಿದೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 