ಗಲಭೆ ಕೋರರನ್ನು ಮಟ್ಟ ಹಾಕಿ ಪೊಲೀಸರಿಗೆ ದೆಹಲಿ ಹೈಕೋರ್ಟ್ ಖಡಕ್ ಎಚ್ಚರಿಕೆ
ನವದೆಹಲಿ, ಫೆ 26 : ದೆಹಲಿ ಯಲ್ಲಿನ ಹಿಂಸಾಚಾರ ತಡೆಗಟ್ಟಲು ಸ್ವಯಂಪ್ರೇರಿತರಾಗಿ ಅಗತ್ಯ ಕ್ರಮ ಕೈಗೊಳ್ಳಿ ಎಂದು ದೆಹಲಿ ಕೋರ್ಟ್ ಪೊಲೀಸರಿಗೆ ಖಡಕ್ ನಿರ್ದೇಶನ ನೀಡಿದೆ.
ಪೌರತ್ವ ತಿದ್ದುಪಡಿ ಕಾಯ್ದೆಯ (ಸಿಎಎ) ಪರ-ವಿರುದ್ಧದ ಪ್ರತಿಭಟನೆಯಲ್ಲಿ ಈಶಾನ್ಯ ದೆಹಲಿಯಲ್ಲಿ ಉಂಟಾಗಿರುವ ಹಿಂಸಾಚಾರ ಸಂಬಂಧ ಕೋರ್ಟ್ ಇದೇ ಸಮಯದಲ್ಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.
ದೆಹಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆ, ಸಂತ್ರಸ್ತರಿಗೆ ಪರಿಹಾರ ಮತ್ತು ಪ್ರಚೋದನಾಕಾರಿ ಭಾಷಣ ಮಾಡಿದ ಅನೇಕ ರಾಜಕೀಯ ನಾಯಕರನ್ನು ಬಂಧನ ಕುರಿತಂತೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಮನವಿಯ ವಿಚಾರಣೆ ನಡೆಸಿದ ಕೋರ್ಟ್, ದೆಹಲಿ ಪೊಲೀಸ್ ಕಮಿಷನರ್ಗೂ ನೋಟಿಸ್ ಜಾರಿ ಮಾಡಿದೆ.
ಸಿಎಎ ಕುರಿತಾಗಿ ಭುಗಿಲೆದ್ದ ಈಶಾನ್ಯ ದೆಹಲಿಯ ಹಿಂಸಾಚಾರ ಕುರಿತಂತೆ ಮಧ್ಯಾಹ್ನ ದೊಳಗೆ ಪ್ರತಿಕ್ರಿಯೆ ಕೊಡಬೇಕು ಎಂದು ಗಡುವು ಹಾಕಿದೆ ಗಳಬೆ ಮತ್ತು ದೊಂಬಿ, ಲೂಟಿಯಲ್ಲಿ ತೊಡಗಿರುವವರನ್ನು ಹತ್ತಿಕ್ಕಲು ಪೊಲೀಸರು ಯಾವ ಆದೇಶಕ್ಕೆ ಕಾಯದೆ ಸ್ವಯಂ ಕಾನೂನು ಕ್ರಮ ಜರುಗಿಸಬೇಕು ಎಂದೂ ಕೋರ್ಟ್ ಖಡಕ್ಕಾಗಿ ಹೇಳಿದೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 