ದೆಹಲಿ ಮಾಲಿನ್ಯ : ಶಾಲೆಗಳು ನ 15 ರವರೆಗೆ ಬಂದ್
ನವದೆಹಲಿ, ನ 14 : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯದ ಹಿನ್ನೆಲೆಯಲ್ಲಿ ಶಾಲೆಗಳಿಗೆ ಗುರುವಾರ ಮತ್ತು ಶುಕ್ರವಾರ ರಜೆ ಘೋಷಿಸಲಾಗಿದೆ.
ಗಾಳಿಯ ಗುಣಮಟ್ಟ ತೀವ್ರ ಹದಗೆಟ್ಟಿದೆ ಎಂದು ಪರಿಸರ ಮಾಲಿನ್ಯ (ತಡೆ ಮತ್ತು ನಿಯಂತ್ರಣ) ಪ್ರಾಧಿಕಾರ ತಿಳಿಸಿದ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಕಟ್ಟಡ ನಿರ್ಣಾಣದಲ್ಲಿನ ಉಪಯೋಗಿಸುವ ಯಂತ್ರಗಳ ಬಳಕೆಗೂ ನ 15 ರವರೆಗೆ ನಿಷೇಧ ಹೇರಲಾಗಿದೆ.
ಫರಿದಾಬಾದ್, ಗುರುಗ್ರಾಮ್, ಗಜಿಯಾಬಾದ್, ನೋಯ್ಡಾ, ಬಹದುರ್ಗಾ, ಭಿವಾಡಿ, ಸೋನೆಪಟ್, ಪಾಣಿಪತ್ ಗಳಲ್ಲಿನ ಎಲ್ಲಾ ಕಲ್ಲಿದ್ದಲು ಮತ್ತು ನೈಸರ್ಗಿಕ ಅನಿಲ ಬಳಸದ ಇತರ ಇಂಧನ ಆಧಾರಿತ ಕೈಗಾರಿಕೆಗಳೂ ಶುಕ್ರವಾರದವರೆಗೆ ಮುಚ್ಚಿರಲಿವೆ.
ದೆಹಲಿಯಲ್ಲಿ ವಾಯುಮಾಲಿನ್ಯ ಮಿತಿಮೀರುತ್ತಿದ್ದು ಜನರ ಆರೋಗ್ಯ ರಕ್ಷಣೆಗೆ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿದೆ. ನೆರೆ ರಾಜ್ಯಗಳ ಉಳಿಕೆ ಸುಡುವಿಕೆ ಕೂಡ ದೆಹಲಿ ಮೇಲೆ ಪರಿಣಾಮ ಬೀರಿದೆ. ಸಮ - ಬೆಸ ಕ್ರಮದನ್ವಯ ವಾಹನಗಳ ಸಂಚಾರಕ್ಕೆ ಮಿತಿಯೊಡ್ಡಲಾಗಿದೆ. ಆದಾಗ್ಯೂ ದೆಹಲಿಯಲ್ಲಿ ವಾಯುಗುಣಮಟ್ಟ ಹತೋಟಿಗೆ ಬಂದಿಲ್ಲ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 