ದೆಹಲಿ ಮಾಲಿನ್ಯ : ಶಾಲೆಗಳು ನ 15 ರವರೆಗೆ ಬಂದ್
ನವದೆಹಲಿ, ನ 14 : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯದ ಹಿನ್ನೆಲೆಯಲ್ಲಿ ಶಾಲೆಗಳಿಗೆ ಗುರುವಾರ ಮತ್ತು ಶುಕ್ರವಾರ ರಜೆ ಘೋಷಿಸಲಾಗಿದೆ.
ಗಾಳಿಯ ಗುಣಮಟ್ಟ ತೀವ್ರ ಹದಗೆಟ್ಟಿದೆ ಎಂದು ಪರಿಸರ ಮಾಲಿನ್ಯ (ತಡೆ ಮತ್ತು ನಿಯಂತ್ರಣ) ಪ್ರಾಧಿಕಾರ ತಿಳಿಸಿದ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಕಟ್ಟಡ ನಿರ್ಣಾಣದಲ್ಲಿನ ಉಪಯೋಗಿಸುವ ಯಂತ್ರಗಳ ಬಳಕೆಗೂ ನ 15 ರವರೆಗೆ ನಿಷೇಧ ಹೇರಲಾಗಿದೆ.
ಫರಿದಾಬಾದ್, ಗುರುಗ್ರಾಮ್, ಗಜಿಯಾಬಾದ್, ನೋಯ್ಡಾ, ಬಹದುರ್ಗಾ, ಭಿವಾಡಿ, ಸೋನೆಪಟ್, ಪಾಣಿಪತ್ ಗಳಲ್ಲಿನ ಎಲ್ಲಾ ಕಲ್ಲಿದ್ದಲು ಮತ್ತು ನೈಸರ್ಗಿಕ ಅನಿಲ ಬಳಸದ ಇತರ ಇಂಧನ ಆಧಾರಿತ ಕೈಗಾರಿಕೆಗಳೂ ಶುಕ್ರವಾರದವರೆಗೆ ಮುಚ್ಚಿರಲಿವೆ.
ದೆಹಲಿಯಲ್ಲಿ ವಾಯುಮಾಲಿನ್ಯ ಮಿತಿಮೀರುತ್ತಿದ್ದು ಜನರ ಆರೋಗ್ಯ ರಕ್ಷಣೆಗೆ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿದೆ. ನೆರೆ ರಾಜ್ಯಗಳ ಉಳಿಕೆ ಸುಡುವಿಕೆ ಕೂಡ ದೆಹಲಿ ಮೇಲೆ ಪರಿಣಾಮ ಬೀರಿದೆ. ಸಮ - ಬೆಸ ಕ್ರಮದನ್ವಯ ವಾಹನಗಳ ಸಂಚಾರಕ್ಕೆ ಮಿತಿಯೊಡ್ಡಲಾಗಿದೆ. ಆದಾಗ್ಯೂ ದೆಹಲಿಯಲ್ಲಿ ವಾಯುಗುಣಮಟ್ಟ ಹತೋಟಿಗೆ ಬಂದಿಲ್ಲ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 