ಡೆಲಿವರಿ ಬಾಯ್ಸ್ ಗಳನ್ನು ದರೋಡೆ ಮಾಡಿದ ದುಷ್ಕರ್ಮಿಗಳು
ಬೆಂಗಳೂರು, ಜ 9, ನಗರದಲ್ಲಿ ದುಷ್ಕರ್ಮಿಗಳು ಡೆಲಿವರಿ ಬಾಯ್ಸ್ಗಳನ್ನು ಕೇಂದ್ರಿಕರಿಸಿಕೊಂಡು ದರೋಡೆ ಮಾಡಿರುವ ಪ್ರಕರಣಗಳು ವರದಿ ಆಗಿವೆ.ಅಧಿಕ ಮೊತ್ತದ ಆಹಾರ ಆರ್ಡರ್ ಮಾಡಿ, ಅದನ್ನು ಡೆಲಿವರಿ ಮಾಡಲು ಬಂದಿದ್ದ ಸಿಬ್ಬಂದಿಯಿಂದ ಹಣ, ಮೊಬೈಲ್ ಹಾಗೂ ಪರ್ಸ್ ದೋಚಿ ಪರಾರಿಯಾಗಿದ್ದಾರೆ. ಇನ್ನೊಂದೆಡೆ ದುಷ್ಕರ್ಮಿಗಳು ಸಿಟಿ ಕ್ರೈಂ ಬ್ರಾಂಚ್ ಲೊಕೇಷನ್ ನೀಡಿ ನಾನ್ ವೆಜ್ ಫುಡ್ ಆರ್ಡರ್ ಮಾಡಿದ್ದಾರೆ. ಬಳಿಕ ಆರ್ಡರ್ ಡೆಲಿವರಿ ಮಾಡಲು ಬಂದ ಡೆಲಿವರಿ ಬಾಯ್ ಸಚಿನ್ ಅನ್ನು ಸುಬ್ರಹ್ಮಣ್ಯಪುರದ ನಿರ್ಜನ ಪ್ರದೇಶಕ್ಕೆ ಕರೆಸಿದ್ದಾರೆ. ಅಲ್ಲಿ ಮಚ್ಚು ರಾಡ್ನಿಂದ ಹಲ್ಲೆ ನಡೆಸಿ ಸಚಿನ್ ಅವ ರ ಮೊಬೈಲ್, ಪರ್ಸ್ ಹಾಗೂ ಚೈನ್ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಕಾಟನ್ಪೇಟೆಯಲ್ಲಿ ಮಧು ಎಂಬಾತನ ಮೇಲೆ ಹಾಗೂ ಸುಬ್ರಹ್ಮಣ್ಯ ಪುರದಲ್ಲಿ ಸಚಿನ್ ಎಂಬಾತನ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಿದ್ದಾರೆ.ಸದ್ಯ ಎರಡು ಪ್ರಕರಣಗಳ ಆರೋಪಿಗಳಿಗಾಗಿ ಕಾಟನ್ ಪೇಟೆ ಮತ್ತು ಸುಬ್ರಹ್ಮಣ್ಯಪುರ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 