ಡೆಲಿವರಿ ಬಾಯ್ಸ್ ಗಳನ್ನು ದರೋಡೆ ಮಾಡಿದ ದುಷ್ಕರ್ಮಿಗಳು
ಬೆಂಗಳೂರು, ಜ 9, ನಗರದಲ್ಲಿ ದುಷ್ಕರ್ಮಿಗಳು ಡೆಲಿವರಿ ಬಾಯ್ಸ್ಗಳನ್ನು ಕೇಂದ್ರಿಕರಿಸಿಕೊಂಡು ದರೋಡೆ ಮಾಡಿರುವ ಪ್ರಕರಣಗಳು ವರದಿ ಆಗಿವೆ.ಅಧಿಕ ಮೊತ್ತದ ಆಹಾರ ಆರ್ಡರ್ ಮಾಡಿ, ಅದನ್ನು ಡೆಲಿವರಿ ಮಾಡಲು ಬಂದಿದ್ದ ಸಿಬ್ಬಂದಿಯಿಂದ ಹಣ, ಮೊಬೈಲ್ ಹಾಗೂ ಪರ್ಸ್ ದೋಚಿ ಪರಾರಿಯಾಗಿದ್ದಾರೆ. ಇನ್ನೊಂದೆಡೆ ದುಷ್ಕರ್ಮಿಗಳು ಸಿಟಿ ಕ್ರೈಂ ಬ್ರಾಂಚ್ ಲೊಕೇಷನ್ ನೀಡಿ ನಾನ್ ವೆಜ್ ಫುಡ್ ಆರ್ಡರ್ ಮಾಡಿದ್ದಾರೆ. ಬಳಿಕ ಆರ್ಡರ್ ಡೆಲಿವರಿ ಮಾಡಲು ಬಂದ ಡೆಲಿವರಿ ಬಾಯ್ ಸಚಿನ್ ಅನ್ನು ಸುಬ್ರಹ್ಮಣ್ಯಪುರದ ನಿರ್ಜನ ಪ್ರದೇಶಕ್ಕೆ ಕರೆಸಿದ್ದಾರೆ. ಅಲ್ಲಿ ಮಚ್ಚು ರಾಡ್ನಿಂದ ಹಲ್ಲೆ ನಡೆಸಿ ಸಚಿನ್ ಅವ ರ ಮೊಬೈಲ್, ಪರ್ಸ್ ಹಾಗೂ ಚೈನ್ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಕಾಟನ್ಪೇಟೆಯಲ್ಲಿ ಮಧು ಎಂಬಾತನ ಮೇಲೆ ಹಾಗೂ ಸುಬ್ರಹ್ಮಣ್ಯ ಪುರದಲ್ಲಿ ಸಚಿನ್ ಎಂಬಾತನ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಿದ್ದಾರೆ.ಸದ್ಯ ಎರಡು ಪ್ರಕರಣಗಳ ಆರೋಪಿಗಳಿಗಾಗಿ ಕಾಟನ್ ಪೇಟೆ ಮತ್ತು ಸುಬ್ರಹ್ಮಣ್ಯಪುರ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 