ಫಲಾನುಭವಿಗಳಿಗೆ ಸಿಲಿಂಡರ್ ಪರಿಕರ ವಿತರಣೆ
ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಮಂಜೂರಾದ 19 ಫಲಾನುಭವಿಗಳಿಗೆ ಸಿಲಿಂಡರ್ ಪರಿಕರಗಳನ್ನು ಶಾಸಕ ಡಿ.ಎಮ್.ಐಹೊಳೆ ವಿತರಿಸಿದ
ರಾಯಬಾಗ 26: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಹೆಣ್ಣು ಮಕ್ಕಳು ಸೌದೆೆಯನ್ನು ತಂದು ಅಡುಗೆ ಮಾಡಲು ಪಡುತ್ತಿರುವ ಕಷ್ಟವನ್ನು ಅರಿತು ಪ್ರತಿ ಬಿಪಿಎಲ್ ಕುಟುಂಬಗಳಿಗೆ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಸಿಲಿಂಡರ್ಗಳನ್ನು ನೀಡಲಾಗುತ್ತಿದೆ ಶಾಸಕ ಡಿ.ಎಮ್.ಐಹೊಳೆ ಹೇಳಿದರು.
ಮಂಗಳವಾರ ತಾಲೂಕಿನ ಬಾವನಸೌಂದತ್ತಿ ಗ್ರಾಮದ ಗ್ರಾಮ ಪಂಚಾಯತಿ ಆವರಣದಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಮಂಜೂರಾದ 19 ಫಲಾನುಭವಿಗಳಿಗೆ ಸಿಲಿಂಡರ್ ಪರಿಕರಗಳನ್ನು ವಿತರಿಸಿ ಅವರು ಮಾತನಾಡಿದರು.
ಗ್ರಾಮೀಣ ಭಾಗದ ಜನರು ಅಡುಗೆ ಮಾಡಲು ಅರಣ್ಯ ಕಟ್ಟಿಗೆಗಳನ್ನು ಕಡಿಯದೇ ಈಗ ನೀಡಿರುವ ಸಿಲಿಂಡರ್ಗಳ ಮೇಲೆ ಅಡುಗೆ ಮಾಡಿಕೊಂಡು ಕಾಡನ್ನು ಉಳಿಸಲು ಎಲ್ಲರೂ ಕೈಜೋಡಿಸಬೇಕೆಂದು ಕರೆ ನೀಡಿದರು.
ಗ್ರಾ.ಪಂ.ಅಧ್ಯಕ್ಷ ಅಜೀತ ಖೆಮಲಾಪೂರೆ, ಉಪಾಧ್ಯಕ್ಷೆ ಶೋಭಾ ಶಿಂದೆ, ತಾತ್ಯಾಸಾಬ ಕಾಟೆ, ಅನೀಲ ಹಂಜೆ, ಅಂಕುಶ ಜಾಧವ, ಶ್ರೀಮಂತ ಹಂಜೆ, ದಶರಥ ಕಾಟೆ, ಶಾಂತಿನಾಥ ಪಾಟೀಲ, ಶ್ರೀಕಾಂತ ಮಂಗಸೂಳೆ, ಗಂಗಾರಾಮ ಕುಂಬಾರ, ಬಾಹುಬಲಿ ಮಗದುಮ್ಮ, ಚಿದಾನಂದ ಮಂಗಸೂಳೆ, ರಾವಸಾಬ ಕಾಟೆ ಹಾಗೂ ಗ್ರಾ.ಪಂ.ಸದಸ್ಯರು, ಫಲಾನುಭವಿಗಳು ಮತ್ತು ಗ್ರಾಮಸ್ಥರು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 