ಕೆ.ಎಂ.ಸೈಯದ್ರಿಂದ ಆಹಾರ ಸಾಮಗ್ರಿಗಳ ಕಿಟ್ ವಿತರಣೆ
ಲೋಕದರ್ಶನ ವರದಿ
ಕೊಪ್ಪಳ 05: ನಗರದ 03,04 ಮತ್ತು 7,12ನೇ ವಾಡರ್್ಗಳು ಸೇರಿದಂತೆ ವಿವಿಧ ವಾಡರ್್ಗಳಲ್ಲಿ ಸೈಯದ್ ಫೌಂಡೇಶನ್ ಚಾರಿಟೇಬಲ್ ಅಧ್ಯಕ್ಷ ಕೆ.ಎಂ.ಸೈಯದ್ ಅವರು ಬಡ ಕುಟುಂಬಗಳಿಗೆ ದಿನಬಳಕೆಯ ಆಹಾರ ಸಾಮಗ್ರಿಗಳ ಕಿಟ್ ವಿತರಿಸಿದರು.
ದೇಶದಲ್ಲಿ ಕೋರೋನಾ ವೈರಸ್ ಹರಡದಂತೆ ಪ್ರಧಾನಿ ನರೇಂದ್ರ ಮೋದಿಯವರು ದೇಶದಲ್ಲಿ 21 ದಿನಗಳವರೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಲಾಕ್ ಡೌನ್ ಮಾಡಿದ್ದಾರೆ.ಇಂತಹ ಸಂದರ್ಭದಲ್ಲಿ ತೀವ್ರ ಸಂಕಷ್ಟದಲ್ಲಿರುವ ಬಡಕುಟುಂಬಗಳಿಗೆ ಫೌಂಡೇಶನ್ನಿಂದ ನೆರವು ನೀಡಲಾಯಿತು.
ಸೈಯದ್ ಫೌಂಡೇಶನ್ ಚಾರಿಟೇಬಲ್ ಅಧ್ಯಕ್ಷ ಕೆ.ಎಂ.ಸೈಯದ್ ಅವರು ಬಡಜನತೆಗೆ ಸದಾ ನೆರವು ನೀಡುತ್ತಾರೆ ಈಗ ಸಹ ಆಹಾರ ಸಾಮಗ್ರಿಗಳನ್ನು ನೀಡಿ ನಮಗೆ ಆತ್ಮಸೆರ್ಯ ತುಂಬಿದ್ದಾರೆ ಎಂದು ಗಂಗಮ್ಮ ಚಿಲವಾಡಿಗಿ ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಮಾಜಿ ಸದಸ್ಯ ಖಾಜಾವಲಿ ಬನ್ನಿಕೊಪ್ಪ, ಯುವ ಮುಖಂಡರಾದ ರಮೇಶ ಗಿಣಿಗೇರಾ, ಸಲೀಂ ಅಳವಂಡಿ, ಎಫ್.ಎ.ನೂರಭಾಷ, ಮಹೆಬೂಬು ಮಚ್ಚಿ, ಜಾಫರ ಸಾದೀಕ, ಆಸ್ಫಾಕ್ ಗದಗ, ಅನ್ವರಪಾಶಾ, ಕುಮಾರ ಮಂಗಳಾಪುರು, ಇಬ್ರಾಹಿಂ,ಜಾವೀದ್ ಮಂಗಳಾಪುರು, ಅಜೀಮ್ ಅತ್ತಾರ್, ಅನ್ವರ್ ಬಾಷ ಮುದಗಲ್, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 