ಕೆ.ಎಂ.ಸೈಯದ್ರಿಂದ ಆಹಾರ ಸಾಮಗ್ರಿಗಳ ಕಿಟ್ ವಿತರಣೆ
ಲೋಕದರ್ಶನ ವರದಿ
ಕೊಪ್ಪಳ 05: ನಗರದ 03,04 ಮತ್ತು 7,12ನೇ ವಾಡರ್್ಗಳು ಸೇರಿದಂತೆ ವಿವಿಧ ವಾಡರ್್ಗಳಲ್ಲಿ ಸೈಯದ್ ಫೌಂಡೇಶನ್ ಚಾರಿಟೇಬಲ್ ಅಧ್ಯಕ್ಷ ಕೆ.ಎಂ.ಸೈಯದ್ ಅವರು ಬಡ ಕುಟುಂಬಗಳಿಗೆ ದಿನಬಳಕೆಯ ಆಹಾರ ಸಾಮಗ್ರಿಗಳ ಕಿಟ್ ವಿತರಿಸಿದರು.
ದೇಶದಲ್ಲಿ ಕೋರೋನಾ ವೈರಸ್ ಹರಡದಂತೆ ಪ್ರಧಾನಿ ನರೇಂದ್ರ ಮೋದಿಯವರು ದೇಶದಲ್ಲಿ 21 ದಿನಗಳವರೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಲಾಕ್ ಡೌನ್ ಮಾಡಿದ್ದಾರೆ.ಇಂತಹ ಸಂದರ್ಭದಲ್ಲಿ ತೀವ್ರ ಸಂಕಷ್ಟದಲ್ಲಿರುವ ಬಡಕುಟುಂಬಗಳಿಗೆ ಫೌಂಡೇಶನ್ನಿಂದ ನೆರವು ನೀಡಲಾಯಿತು.
ಸೈಯದ್ ಫೌಂಡೇಶನ್ ಚಾರಿಟೇಬಲ್ ಅಧ್ಯಕ್ಷ ಕೆ.ಎಂ.ಸೈಯದ್ ಅವರು ಬಡಜನತೆಗೆ ಸದಾ ನೆರವು ನೀಡುತ್ತಾರೆ ಈಗ ಸಹ ಆಹಾರ ಸಾಮಗ್ರಿಗಳನ್ನು ನೀಡಿ ನಮಗೆ ಆತ್ಮಸೆರ್ಯ ತುಂಬಿದ್ದಾರೆ ಎಂದು ಗಂಗಮ್ಮ ಚಿಲವಾಡಿಗಿ ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಮಾಜಿ ಸದಸ್ಯ ಖಾಜಾವಲಿ ಬನ್ನಿಕೊಪ್ಪ, ಯುವ ಮುಖಂಡರಾದ ರಮೇಶ ಗಿಣಿಗೇರಾ, ಸಲೀಂ ಅಳವಂಡಿ, ಎಫ್.ಎ.ನೂರಭಾಷ, ಮಹೆಬೂಬು ಮಚ್ಚಿ, ಜಾಫರ ಸಾದೀಕ, ಆಸ್ಫಾಕ್ ಗದಗ, ಅನ್ವರಪಾಶಾ, ಕುಮಾರ ಮಂಗಳಾಪುರು, ಇಬ್ರಾಹಿಂ,ಜಾವೀದ್ ಮಂಗಳಾಪುರು, ಅಜೀಮ್ ಅತ್ತಾರ್, ಅನ್ವರ್ ಬಾಷ ಮುದಗಲ್, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 