ನಾಳೆಯಿಂದ ಮನೆಗಳಿಗೆ ಮಾವಿನ ಹಣ್ಣು ಪೂರೈಕೆ: ಅಂಚೆ ಇಲಾಖೆಯಿಂದ ವಿನೂತನ ಸೇವೆ..!!!
ಬೆಂಗಳೂರು, ಏ 17, ರೈತರು ಬೆಳೆದ ತಾಜಾ ಮಾವಿನ ಹಣ್ಣುಗಳನ್ನು ಮನೆ ಮನೆಗೆ ತಲುಪಿಸಲು ಅಂಚೆ ಇಲಾಖೆ ಕಾರ್ಯಪ್ರವೃತ್ತವಾಗಿದೆ. ಕೊರೋನಾ ವೈರಸ್ ನಿಯಂತ್ರಣ ಉದ್ದೇಶದಿಂದ ಜಾರಿಮಾಡಿರುವ ಲಾಕ್ ಸೌನ್ ಸಂದರ್ಭದಲ್ಲಿ ಅಂಚೆ ಇಲಾಖೆ ರೈತರ ನೆರವಿಗೆ ಧಾವಿಸಿದೆ. ನಾಳೆಯಿಂದ ಬೆಂಗಳೂರಿನ ನಾಗರೀಕರಿಗೆ ಮನೆ ಬಾಗಿಲಿಗೆ ಬಾಯಲ್ಲಿ ನೀರೂರಿಸುವ ಹಣ್ಣುಗಳ ರಾಜಾ ಮಾವಿನ ಹಣ್ಣುಗಳ ವಿತರಣೆ ಸೇವೆ ಆರಂಭವಾಗಲಿದೆ. ನೇರವಾಗಿ ರೈತರಿಂದ ಗ್ರಾಹಕರ ಮನೆಗೆ ಮಾವಿನ ಹಣ್ಣಿನ ಪೂರೈಕೆಗೆ ಅಂಚೆ ಇಲಾಖೆ ಸಜ್ಜಾಗಿದೆ. ಈ ಮೂಲಕ ಮಧ್ಯವರ್ತಿಗಳ ಹಾವಳಿ ತಪ್ಪಿಸಿ ಗ್ರಾಹಕರಿಗೂ ಅನುಕೂಲ ಮಾಡಿಕೊಡುವ ಜತೆಗೆ ರೈತರನ್ನು ಉಳಿಸುವ ಮಾನವೀಯ ಸೇವೆಗೆ ಅಂಚೆ ಇಲಾಖೆ ಸಜ್ಜಾಗಿದೆ. ಇಂದು ಮದ್ಯಾಹ್ನದಿಂದ ಅಂಚೆ ಮಿತ್ರ ಅಪ್ ಮೂಲಕ ಬುಕ್ಕಿಂಗ್ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ. ಎಲ್ಲರೂ ಈ ಸೌಲಭ್ಯ ಉಪಯೋಗಿಸಬೇಕು. ರೈತರಿಗೆ ನೇರವಾಗುವ ದ್ಯೇಯ ನಮ್ಮದಾಗಿದೆ ಎಂದು ಎಂದು ಅಂಚೆ ಇಲಾಖೆ ಪ್ರಕಟಣೆ ತಿಳಿಸಿದೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 