ಮಹಾಮೇಳಕ್ಕೆ ಸಿದ್ಧತೆ ನಡೆಸಿರುವ ಝಾಪಾಗಳ ಬಂಧನಕ್ಕೆ ಒತ್ತಾಯ
Demand for arrest of Jhapas preparing for Maha Mela
ಬೆಳಗಾವಿ 05: ರಾಜ್ಯ ವಿಧಾನ ಮಂಡಳ ಅಧಿವೇಶನ ನಡೆಯುವ ಸಂದರ್ಭದಲ್ಲಿಯೇ ಮಹಾ ಮೇಳ ನಡೆಸಲು ಸಿದ್ಧತೆ ನಡೆಸಿರುವ ಮಹಾರಾಷ್ಟ್ರ ಏಕೀಕರಣ ಸಮಿತಿಯ ನಾಯಕರನ್ನು ಮುಂಜಾಗ್ರತ ಕ್ರಮವಾಗಿ ಬಂಧಿಸಬೇಕು ಮತ್ತು ಮಹಾ ಮೇಳ ನಡೆಸುವ ಪ್ರದೇಶದಲ್ಲಿ ನಿಷೇಧ ಆದೇಶ ಜಾರಿ ಮಾಡಬೇಕೆಂದು ಗಡಿನಾಡು ಕನ್ನಡಿಗರ ಸೇನೆಯು ಶುಕ್ರವಾರ ಜಿಲ್ಲಾಧಿಕಾರಿ ಮೊಹಮದ ರೋಷನ್ ಅವರನ್ನು ಆಗ್ರಹಿಸಿದೆ.
ಈ ಸಂಬಂಧ ಮನವಿಯೊಂದನ್ನು ಸಲ್ಲಿಸಿರುವ ಗಡಿನಾಡು ಕನ್ನಡಿಗರ ಸೇನೆಯ ರಾಜ್ಯಾಧ್ಯಕ್ಷ ಬಲರಾಮ ಮಾಸೆನಟ್ಟಿ ಅವರು, ನವೆಂಬರ್ ಒಂದರಂದು ಕಪ್ಪು ದಿನಾಚರಣೆಯನ್ನು ಆಚರಿಸದಂತೆ ಜಿಲ್ಲಾಡಳಿತವು ಎಚ್ಚರಿಕೆ ನೀಡಿದರು ಸಹ ಎಮ್ಈಎಸ್ ನಾಯಕರು ಸಹಸ್ರಾರು ಜನರ ಮೆರವಣಿಗೆ ನಡೆಸಿತು. ಈಗಲೂ ಅದೇ ರೀತಿ ಆಗುವ ಸಾಧ್ಯತೆ ಇದ್ದು ಅವರನ್ನು ಮುಂಜಾಗ್ರತೆ ಕ್ರಮವಾಗಿ ಬಂಧಿಸಬೇಕು ಹಾಗೂ ಅವರು ಕಾರ್ಯಕ್ರಮ ನಡೆಸುವ ಪ್ರದೇಶದಲ್ಲಿ ನಿಷೇಧ ಹೆರಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಟ ಭೀಮಾಶಂಕರ್ ಗುಳೇದ ಅವರು ಸಹ ಹಾಜರಿದ್ದರು. ಗಡಿನಾಡು ಕನ್ನಡಿಗರ ಸೇನೆಯ ಪದಾಧಿಕಾರಿಗಳಾದ ಸಂತೋಷ ಮಾಸೇನಟ್ಟಿ, ಆನಂದ ಬಿಲಾವರ, ಎಸ್.ಎಸ್.ಮೂಕನವರ, ಕಿರಣ ಚಿತಂಪಳೆ, ಮಯೂರ್ ಕಾಂಬಳೆ, ಮಂಜುನಾಥ ಪಾಸ್ತೇ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 