ಅತಿಥಿ ಉಪನ್ಯಾಸಕರ ವೇತನ ತಾರತಮ್ಯ ನಿವಾರಣೆಗೆ ಆಗ್ರಹ; ಸೇವಾ ಭದ್ರತೆ ಕಲ್ಪಿಸಲು ಮನವಿ
Demand for elimination of salary discrimination of guest lecturers; Request for service security
ಹೂವಿನಹಡಗಲಿ, ಆ. 4: ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಶಾಸಕ ಕೃಷ್ಣ ನಾಯಕ್ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.
ಮನವಿಯಲ್ಲಿ ಅತಿಥಿ ಉಪನ್ಯಾಸಕರ ವೇತನದಲ್ಲಿರುವ ತಾರತಮ್ಯವನ್ನು ತಕ್ಷಣ ನಿವಾರಿಸಬೇಕು, ಸೇವಾ ಭದ್ರತೆ ಕಲ್ಪಿಸಬೇಕು ಹಾಗೂ ಹಲವು ವರ್ಷಗಳಿಂದ ಬಾಕಿ ಉಳಿದಿರುವ ಬೇಡಿಕೆಗಳನ್ನು ಸರ್ಕಾರ ಆದ್ಯತೆಯ ಮೇರೆಗೆ ಪರಿಗಣಿಸಬೇಕು ಎಂದು ಒತ್ತಾಯಿಸಲಾಯಿತು.
ಶಿಕ್ಷಣ ಕ್ಷೇತ್ರದಲ್ಲಿ ಅತಿಥಿ ಉಪನ್ಯಾಸಕರು ಸಲ್ಲಿಸುತ್ತಿರುವ ಸೇವೆಗೆ ತಕ್ಕ ಗೌರವ ಹಾಗೂ ಭದ್ರತೆ ಒದಗಿಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಮನವಿಯಲ್ಲಿ ಕೋರಲಾಗಿದೆ. ಮನವಿ ಸ್ವೀಕರಿಸಿದ ಶಾಸಕ ಕೃಷ್ಣ ನಾಯಕ್, ಅತಿಥಿ ಉಪನ್ಯಾಸಕರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆದು, ಅಗತ್ಯ ಕ್ರಮ ಕೈಗೊಳ್ಳಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಪ್ರಾಂಶುಪಾಲ ಎ. ಕೊಟ್ರಗೌಡ ಹಾಲಪ್ಪ, ಶಂಕರ್, ಮಹೇಶ್, ಪರಂಜ್ಯೋತಿ, ಉಮಾ, ರಶ್ಮಿ, ನರೇಶ್ ಸೇರಿದಂತೆ ತಾಲೂಕಿನ ವಿವಿಧ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರು ಉಪಸ್ಥಿತರಿದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 