ರಾಜ್ಯದಲ್ಲಿ ಎಲ್ಲಾ ಸಮುದಾಯದವರಿಗೆ ಶಿಕ್ಷಣ ಮತ್ತು ಆರೋಗ್ಯ ಉಚಿತವಾಗಿ ನೀಡಲು ಆಗ್ರಹ
Demand for free education and healthcare for all communities in the state
ಲೋಕದರ್ಶನ ವರದಿ
ವಿಜಯಪುರ 23 : ರಾಜ್ಯದಲ್ಲಿ ಸಾರ್ವಜನಿಕ ಸೇವೆಯಾದ ಶಿಕ್ಷಣ ಮತ್ತು ಆರೋಗ್ಯ ಉಚಿತವಾಗಿ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನಾ ಸಮಿತಿ ರಾಜ್ಯ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಸ್ಥಾಪಕ ರಾಜ್ಯಾಧ್ಯಕ್ಷ ಜಗದೇವ ಎಸ್. ಸೂರ್ಯವಂಶಿ ಮಾತನಾಡಿ, ಕರ್ನಾಟಕದಲ್ಲಿ ಈಗಾಗಲೇ ತಮ್ಮ ಮುಂದಾಳತ್ವದಲ್ಲಿ ಆಡಳಿತ ಯಂತ್ರ ಅತ್ಯಂತ ವೇಗಗತಿಯಲ್ಲಿ ಅಧಿಕಾರ ವಹಿಸಿಕೊಂಡ ತಕ್ಷಣವೇ ಪ್ರಥಮ ಹಂತದ ಜನಪರ ಯೋಜನೆಗಳು ಘೋಷಣೆ ಮಾಡಿರುವುದು ಸಂತೋಷವಾಗಿದೆ. ಈಗಾಗಲೇ ಐದು ಗ್ಯಾರಂಟಿಗಳು ಸಾರ್ವಜನಿಕರಿಗೆ ಸದುಪಯೋಗವಾಗಿರುತ್ತವೆ.
ಮಹಿಳೆಯರಿಗೆ ಕೊಡಮಾಡಿರುವ ಸಾರಿಗೆ ಸೌಲಭ್ಯಗಳು, ಮಹಿಳೆಯರ ಆರ್ಥಿಕ ಅಭಿವೃದ್ಧಿಗೆ ಕೊಡಮಾಡಿರುವ ಎಲ್ಲಾ ಕುಟುಂಬದ ಮುಖ್ಯಸ್ಥರಿಗೆ ಆರ್ಥಿಕ ಸಹಾಯ ಧನ. ಕುಟುಂಬದ ಸ್ವಂತ ಮನೆ ಹೊಂದಿರುವ ಎಲ್ಲಾ ಕುಟುಂಬದ ಮುಖ್ಯಸ್ತರಿಗೆ ವಿದ್ಯುತ್ ಸೌಲಭ್ಯ ಹಾಗೂ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಹೀಗೆ ಹಲವಾರು ಯೋಜನೆಗಳು ಎಲ್ಲ ರೀತಿಯ ಜನರು ಪಡೆಯುತ್ತಿದ್ದಾರೆ. ಸುಮಾರು ಮೂರೂ ವರ್ಷಗಳ ಕಾಲ ಯಾವುದೇ ಅಡೆತಡೆ ಇಲ್ಲದೆ ಪ್ರಜೆಗಳ ಹಿತವನ್ನು ಕಾಪಾಡುವ ಜೊತೆಯಲ್ಲಿ ಬಡವರಿಗೆ ಹಸಿವಿನಿಂದ ತೊಂದರೆ ಆಗಬಾರದೆಂದು ಅಕ್ಕಿಭಾಗ್ಯ ಮಿತಿಯನ್ನು ಹೆಚ್ಚಿಸಿ ಕೊಟ್ಟ ಮಾತಿನಂತೆ ತಮ್ಮ ಸರಕಾರ ಬದ್ಧತೆ ಹೊಂದಿದೆ. ಮುಂದುವರೆದು ಸಾರ್ವಜನಿಕ ಶಿಕ್ಷಣ ಮತ್ತು ಆರೋಗ್ಯ ಸಂವಿಧಾನದ ಆಸೆಗಳಂತೆ ಉಚಿತವಾಗಿ ಹಾಗೂ ಖಾಸಗಿಕರಣ ತಡೆಗಟ್ಟಲು ಅವಶ್ಯಕತೆ ಇದೆ.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 