ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ
Demand for fulfillment of various demands of farmers- Raibag News
ರಾಯಬಾಗ 09: ರೈತರ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಡಿ.11 ರಂದು ಬೆಳ್ಳಿಗ್ಗೆ 11 ಗಂಟೆಗೆ ಬೆಳಗಾವಿ ಸುವರ್ಣ ವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸಿ ಹೋರಾಟ ಯಶಸ್ಸುಗೊಳಿಸಬೇಕೆಂದು ರೈತ ಸಂಘದ ಚಿಕ್ಕೋಡಿ ಜಿಲ್ಲಾಧ್ಯಕ್ಷ ಮಲ್ಲಪ್ಪ ಅಂಗಡಿ ಕರೆ ನೀಡಿದರು.
ಮಂಗಳವಾರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈನುಗಾರಿಕೆ ಮಾಡುವ ರೈತರು ಆರ್ಥಿಕ ನಷ್ಟದಲಿದ್ದು, ಎಮ್ಮೆ ಹಾಲಿಗೆ ರೂ. 100 ಮತ್ತು ಆಕಳು ಹಾಲಿಗೆ 70 ಹೆಚ್ಚಿಸಬೇಕು, ರೈತರ ಸಾಲ ಮನ್ನಾ ಮಾಡಿ, ರೈತರನ್ನು ಸಾಲ ಋಣ ಮುಕ್ತರನ್ನಾಗಿ ಮಾಡಬೇಕು. ಟಿ.ಸಿ.(ವಿದ್ಯುತ ಪರಿವರ್ತಕ) ಗಳನ್ನು ಅಕ್ರಮ ಸಕ್ರಮ ಮಾಡಿ ರೈತರಿಗೆ ಅನುಕೂಲ ಮಾಡಿಕೊಡುವಂತೆ ಸರ್ಕಾರವನ್ನು ಒತ್ತಾಯಿಸಲು ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ತಿಳಿಸಿದರು.
ತಾಲೂಕಾಧ್ಯಕ್ಷ ರಮೇಶ ಕಲ್ಹಾರ, ಜಿ.ಪಂ.ಮಾಜಿ ಸದಸ್ಯ ನಿಂಗಪ್ಪ ಪಕಾಂಡಿ, ಜಿಲ್ಲಾ ಕಾರ್ಯದರ್ಶಿ ಶ್ರೀಶೈಲ ಅಂಗಡಿ, ಕಲ್ಲನಗೌಡ ಪಾಟೀಲ, ಮಹಾದೇವ ಹೊಳ್ಕರ, ವಿಜಯ ನಾಯಿಕ, ಹನುಮಂತ ನಾಯಿಕ, ಮಾರುತಿ ಅರಭಾವಿ, ರಮೇಶ ಪಾಟೀಲ, ಲಕ್ಕಪ್ಪ ಜೋಡಟ್ಟಿ, ರಮೇಶ ಚೌಗಲಾ, ಅಜೀತ ಜಾಧವ, ಸಿದ್ರಾಮ ನಾಯಿಕ ಸೇರಿ ಅನೇಕ ರೈತರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 