ಶಿಗ್ಗಾವಿ ಸಾರಿಗೆ ಘಟಕ ನಿರ್ಮಾಣಕ್ಕೆ ಭೂಮಿ ನೀಡಿದ ರೈತರಿಗೆ ಶೀಘ್ರ ಪರಿಹಾರಕ್ಕೆ ಆಗ್ರಹ
Demand for immediate compensation for farmers who provided land for the construction of the Shiggaon
ಶಿಗ್ಗಾವಿ 07: ಪಟ್ಟಣ ಹೊರವಲಯದಲ್ಲಿ ಸಾರಿಗೆ ಘಟಕ ನಿರ್ಮಾಣಕ್ಕಾಗಿ ಭೂಮಿ ನೀಡಿದ ರೈತರಿಗೆ ತಕ್ಷಣ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಜೀವಿಕ ಜೀವನ ವಿಮುಕ್ತಿ ಹಾಗೂ ಅತಂತ್ರ ಕಾರ್ಮಿಕರ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ಯಲ್ಲಪ್ಪ ಗೊಣೆಣ್ಣವರ ಅವರಿಗೆ ಮನವಿ ಸಲ್ಲಿಸಿದರು. ಶಿಗ್ಗಾವಿ ಸಾರಿಗೆ ಘಟಕ ನಿರ್ಮಾಣಕ್ಕಾಗಿ ಭೂಮಿ ಕಳೆದುಕೊಂಡ ರೈತರಿಗೆ ಸರ್ಕಾರ ಕೂಡಲೇ ಪರಿಹಾರ ಒದಗಿಸಬೇಕು ಎಂದು ಸಂಘದ ಮುಖಂಡರು ಒತ್ತಾಯಿಸಿದರು. ಮನವಿಯಲ್ಲಿ, ಗದಿಗೆಪ್ಪ ಓಲಿ ಎಂಬ ರೈತರ ಆರ್.ಎಸ್. ನಂ. 432ರಲ್ಲಿರುವ 1 ಎಕರೆ ಜಮೀನು ಸಾರಿಗೆ ಘಟಕದ ವ್ಯಾಪ್ತಿಗೆ ಒಳಪಟ್ಟಿದ್ದು, ಆ ಜಮೀನನ್ನೇ ಅವಲಂಬಿಸಿ ಜೀವನ ನಡೆಸುತ್ತಿದ್ದ ಬಡ ರೈತನಿಗೆ ಇದುವರೆಗೆ ಯಾವುದೇ ಪರಿಹಾರ ನೀಡಲಾಗಿಲ್ಲ ಎಂದು ತಿಳಿಸಲಾಗಿದೆ. ರೈತನಿಗೆ ನ್ಯಾಯಯುತ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಸಂಘದ ಪದಾಧಿಕಾರಿಗಳು ಎಚ್ಚರಿಸಿದರು. ಈ ಸಂದರ್ಭದಲ್ಲಿ ದಲಿತ ಮುಖಂಡ ಅಶೋಕ ಕಾಳೆ, ಸುರೇಶ್ ಹರಿಜನ, ಶಿವಪ್ಪ ಓಲಿ, ಗದಿಗೆಪ್ಪ ಓಲಿ, ಶೋಭಾ ಚಂದಾಪುರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ 