ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೆಚ್ಚಿನ ಬಸ್ ಸೌಲಭ್ಯಕ್ಕೆ ಆಗ್ರಹ
Demand for more bus facility for convenience of students
ರಾಯಬಾಗ 02: ತಾಲೂಕಿನಲ್ಲಿ ಸಂಚರಿಸುವ ಬಸ್ ಗಳನ್ನು ಸರಿಯಾದ ಸಮಯದಲ್ಲಿ ಓಡಿಸಬೇಕು ಮತ್ತು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೆಚ್ಚಿನ ಬಸ್ ಗಳನ್ನು ಓಡಿಸಬೇಕೆಂದು ಆಗ್ರಹಿಸಿ ಗುರುವಾರ ಗ್ರೇಡ್2 ತಹಶೀಲ್ದಾರ ಪರಮಾನಂದ ಮಂಗಸೂಳಿ ಅವರ ಮೂಲಕ ವಾ.ಕ.ರಾ.ರ.ಸಾ.ಸಂ. ಚಿಕ್ಕೋಡಿ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಕರ್ನಾಟಕ ಯುವರಕ್ಷಣಾ ವೇದಿಕೆ ರಾಯಬಾಗ ತಾಲೂಕಾ ಘಟಕದ ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ಬೆಳ್ಳಗ್ಗೆ ಪಟ್ಟಣದ ಬಸ್ ನಿಲ್ದಾಣದಲ್ಲಿ ಬಸ್ ಗಳನ್ನು ತಡೆದು ಪ್ರತಿಭಟನೆಯನ್ನು ನಡೆಸಿದ ಕ.ಯು.ರ.ವೇದಿಕೆ ಸದಸ್ಯರು, ರಾಯಬಾಗ ಬಸ್ ಡಿಪೋದಿಂದ ಸರಿಯಾದ ವೇಳೆಯಲ್ಲಿ ಬಸ್ ಸಂಚಾರ ಇಲ್ಲದೇ ಇರುವುದರಿಂದ ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ, ನೌಕರರಿಗೆ ದಿನನಿತ್ಯ ತೊಂದರೆ ಆಗುತ್ತಿದೆ ಎಂದು ಆರೋಪಿಸಿದರು.
ಸಾರಿಗೆ ಸಂಸ್ಥೆಯವರು ರಾಯಬಾಗ ತಾಲೂಕಿನ ವಿವಿಧ ಗ್ರಾಮಗಳಿಗೆ ಶಾಲಾ ವಿದ್ಯಾರ್ಥಿಗಳಿಗೋಸ್ಕರ್ ಹೆಚ್ಚಿನ ಬಸ್ ಓಡಿಸಬೇಕು, ಪಟ್ಟಣದ ಬಸ್ ನಿಲ್ದಾಣದಲ್ಲಿ ನಿಂತಿದ್ದ ವಿದ್ಯಾರ್ಥಿನಿಯರಿಗೆ ಕಿಡಿಗೇಡಿಗಳಿಂದ ಆಗುತ್ತಿರುವ ಕಿರುಕುಳ ಮತ್ತು ರಾತ್ರಿ ನಡೆಯುತ್ತಿರುವ ಅನೈತಿಕ ಚಟುವಟಿಕೆ ತಪ್ಪಿಸಲು ಸಿ.ಸಿ.ಕ್ಯಾಮೆರಾ ಅಳವಡಿಸಬೇಕು, ಸಮಯಕ್ಕೆ ಸರಿಯಾಗಿ ಬಸ್ ಗಳನ್ನು ಓಡಿಸಬೇಕೆಂದು ಆಗ್ರಹಿಸಿದರು.
ಡಿಪೋ ವ್ಯವಸ್ಥಾಪಕ ಜಿ.ಐ.ಬಸವಂತಪೂರ, ಪಿ.ಎಸ್.ಐ ಶಿವಶಂಕರ ಮುಕರಿ, ಕ.ಯು.ರ.ವೇದಿಕೆ ತಾಲೂಕಾಧ್ಯಕ್ಷ ಗಜಾನನ ಮಾಳಿ, ಬೆಳಗಾವಿ ಜಿಲ್ಲಾ ಉಪಾಧ್ಯಕ್ಷ ಅಮರೇಶ ತಾಳಿಕೋಟಿ, ರಾಜು ಹೊಸಟ್ಟಿ, ಈಶ್ವರ ಮಾಳಿ, ಲೋಕೇಶ ಮೇತ್ರಿ, ಸಚೀನ ಮೇತ್ರಿ, ಬಾಬು ಹೊಸಟ್ಟಿ, ಪಿಂಟು ಜಾನವಾಡೆ, ನೀತಿನ ಕುಸ್ತಿಗಾರ, ಗಜಾನನ ಮೇತ್ರಿ, ಸಾಗರ ಕುಲಗುಡೆ, ಸುನೀಲ ಮೇತ್ರಿ, ಸುಮೀತ ಕುಂಬಾರ, ಸಂದೀಪ ಕುಲಗುಡೆ ಸೇರಿ ಅನೇಕರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 