ಮಾನ್ಯ ಪಾಟೀಲ್ ಕೊಲೆಗಡುಕರಿಗೆ ಉಗ್ರ ಶಿಕ್ಷೆಗೆ ಗುರುಪಡಿಸಲು ಒತ್ತಾಯ
Demand for severe punishment for the murderers of Honorable Patil
ಗಂಗಾವತಿ 30 : ಹುಬ್ಬಳ್ಳಿಯ ಇನಾಮ ವೀರಾಪುರ ಗ್ರಾಮದ ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಗರ್ಭಿಣಿ ಮಾನ್ಯ ಪಾಟೀಲ್ ಎನ್ನುವ ಯುವತಿಯನ್ನು ಆಕೆಯ ಕುಟುಂಬಸ್ಥರೆ ಕೊಲೆ ಮಾಡಿದ್ದು ನಾಗರೀಕ ಸಮಾಜ ತಲೆತಗ್ಗಿಸುವ ಸಂಗತಿಯಾಗಿದ್ದು, ಕೂಡಲೆ ಕೊಲೆಗೆಡುಕರನ್ನು ಉಗ್ರ ಶಿಕ್ಷೆಗೆ ಗುರಿಪಡಿಸಬೇಕೆಂದು ಅಖಿಲ ಭಾರತ ಮಾದಿಗ ದಂಡೋರಾ ಗಂಗವತಿ ತಾಲೂಕಾ ಸಮಿತಿ ಗಂಗವತಿ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ.
ದಲಿತ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಬೇಕು, ಯುವಕ ವಿವೇಕಾನಂದ ಇವರಿಗೆ ಸರಕಾರಿ ಉದ್ಯೋಗ ನೀಡಬೇಕು, ನ್ಯಾಯಯುತ ಪರಿಹಾರ ಸರಕಾರ ನೀಡಬೇಕು, ಕೊಲೆಗೆಡುಕು ಪ್ರಕಾಶ್ ಪಾಟೀಲ್ ಇತರರಿಗೆ ಕಠಿಣ ಶಿಕ್ಷೆ ನೀಡಬೇಕು, ರಾಜ್ಯದಾದ್ಯಂತ ದಲಿತರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಕ್ಕೆ ಕಡಿವಾಣ ಹಾಕಬೇಕೆಂದು ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಕನಕಪ್ಪ ದೊಡ್ಡಮನಿ, ಕೊಪ್ಪಳ ಜಿಲ್ಲಾ ಉಪಾಧ್ಯಕ್ಷ ಶಿವಪ್ಪ ಸಿದ್ದಾಪುರ, ಪದಾಧಿಕಾರಿಗಳಾದ ಗುಂಡಪ್ಪ ನೀಲೋಗಲ್, ಯಮನೂರ್ಪ ಗೋನಾಳ, ರಮೇಶ್ ಢಣಾಪುರ ಹಾಗು ಯಮನೂರ್ಪ ಚುಕ್ಕಾಡಿ ಇತರರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 