ಬಸನಗೌಡ ಪಾಟೀಲ್ ಯತ್ನಾಳ್ ಬಂಧನಕ್ಕೆ ಆಗ್ರಹ
Demand for the arrest of Basanagouda Patil Yatnal
ಕೊಪ್ಪಳ 19 : ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ ಹಬ್ಬ ಉದ್ಘಾಟನೆಯ ಬಗ್ಗೆ ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ಮಾತನಾಡುವಾಗ ಮೈಸೂರು ದಸರಾದಲ್ಲಿ ಸನಾತನ ಧರ್ಮದವರು ಮಾತ್ರ ಚಾಮುಂಡಿ ದೇವಿಗೆ ಹೂ ಮುಡಿಸಬೇಕು. ಅದರ ಹೊರತು ಒಬ್ಬ ಸಾಮಾನ್ಯ ದಲಿತ ಹೆಣ್ಣು ಮಕ್ಕಳಿಗೆ ಅವಕಾಶ ಇಲ್ಲ ಎಂದು ಹೇಳುವ ಮೂಲಕ ಇಡೀ ರಾಜ್ಯದ ದಲಿತ ಮಹಿಳೆಯರಿಗೆ ಅವಮಾನ ಮಾಡಿದ್ದಾರೆ.
ಕೂಡಲೇ ಅವರನ್ನು ಬಂಧಿಸುವಂತೆ ವೆಲ್ಫೇರ್ ಪಾರ್ಟಿ ಫಾ ಇಂಡಿಯಾ ಮಹಿಳಾ ವಿಭಾಗದ ರಾಜ್ಯಾಧ್ಯಕ್ಷರಾದ ಸಬಿಹಾ ಪಟೇಲ್ ಆಗ್ರಹಿಸಿದ್ದಾರೆ.ಸಾರ್ವಜನಿಕವಾಗಿ ದಲಿತ ಹೆಣ್ಣು ಮಕ್ಕಳ ಬಗ್ಗೆ ಕೀಳುಮಟ್ಟದಲ್ಲಿ ಹೇಳಿಕೆ ನೀಡುವ ಮೂಲಕ ಅವಮಾನ ಮಾಡಿದ್ದಾರೆ. ಇಂತಹ ಕೊಳಕು ಮನಸ್ಥಿತಿಯ ಮತ್ತು ಕೋಮು ಸಂಘರ್ಷದ, ಪ್ರಚೋದನಕಾರಿ ಹೇಳಿಕೆ ನೀಡಿರುವ ಇವರನ್ನು ವಿಡಿಯೋ ಆಧಾರದ ಮೇಲೆ ಎಸ್ಸಿ ದೌರ್ಜನ್ಯ ಕಾಯ್ದೆಯ ಅಡಿಯಲ್ಲಿ ಬಂಧಿಸಿ ಜೈಲಿಗೆ ಕಳುಹಿಸಬೇಕು ಎಂದು ಅವರು ಹೇಳಿದ್ದಾರೆ.ಶಾಸಕ ಬಸನಗೌಡ ಯತ್ನಾಳ್ ಅವರು ದಲಿತ, ಅಲ್ಪಸಂಖ್ಯಾತರ ಮಹಿಳೆಯರಿಗೆ ಅವಮಾನ ಮಾಡುವ ರೀತಿಯಲ್ಲಿ ಹೇಳಿಕೆಗಳನ್ನು ನಿರಂತರವಾಗಿ ಕೊಡುತ್ತಿದ್ದಾರೆ. ಯತ್ನಾಳ ಅವರ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ತುಂಬಾ ವೈರಲ್ ಆಗಿ ದಲಿತ ಹಾಗೂ ಅಲ್ಪಸಂಖ್ಯಾತ ಸಮಾಜಕ್ಕೆ ತುಂಬಾ ನೋವಾಗಿರುತ್ತದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಸಮಾಜದಲ್ಲಿ ಇಂಥ ಕೋಮು ಪ್ರಚೋದನೆ ನೀಡಿ ಅಶಾಂತಿಗೆ ಕಾರಣರಾಗುತ್ತಿರುವ ಬಸನಗೌಡ ಯತ್ನಾಳ್ ಇವರಿಗೆ ಶಾಸಕತ್ವ ಸ್ಥಾನದಿಂದ ವಾಜ ಮಾಡಬೇಕು. ಒಬ್ಬ ಶಾಸಕರಾಗಿ ಜನರ ಸಮಸ್ಯೆಗಳ ಬಗ್ಗೆ ಕೆಲಸ ಮಾಡುವ ಬದಲು ಹಿಂದೂ ಮುಸ್ಲಿಮರ ಮಧ್ಯೆ ವಿಷ ಬೀಜ ಬಿತ್ತುವುದನ್ನೇ ಕಸಬು ಮಾಡಿಕೊಂಡಿರುವ ಇಂಥ ವ್ಯಕ್ತಿಗಳ ಮೇಲೆ ಸರಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ. ಶ್ರೀಮತಿ ಸಬಿಯಾ ಪಟೇಲ್ಅಧ್ಯಕ್ಷೆ, ರಾಜ್ಯ ಮಹಿಳಾ ವಿಭಾಗ, ಬೆಂಗಳೂರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 