ಹಂಗಾಮಿ ನೌಕರರ ಸಕ್ರಮಾತಿಗೆ ಒತ್ತಾಯಿಸಿ ಧರಣಿ
ಲೋಕದರ್ಶನ ವರದಿ
ಗಂಗಾವತಿ 14: ಹೈದ್ರಾಬಾದ ಕನರ್ಾಟಕ ಪ್ರದೇಶ ವ್ಯಾಪ್ತಿಯ ನಗರ, ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹಂಗಾಮಿ ನೌಕರರ ಸೇವ ಸಕ್ರಮಾತಿಗೆ ಮತ್ತು ಸ್ಥಗಿತಗೊಂಡಿರುವ ವೇತನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಹೈದ್ರಾಬಾದ ಕನರ್ಾಟಕ ಪ್ರದೇಶ ಪೌರ ಸೇವಾ ನೌಕರರ ಸಂಘದ ಸದಸ್ಯರು ಶುಕ್ರವಾರ ನಗರಸಭೆ ಆವರಣದಲ್ಲಿ ಧರಣಿ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ತಾಲೂಕು ಘಟಕದ ಅಧ್ಯಕ್ಷ ರಮೇಶ, ಕೊಪ್ಪಳ ಜಿಲ್ಲೆಯಲ್ಲಿ ಕಳೆದ 30 ವರ್ಷಗಳಿಂದ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರ ಸೇವಾ ನೌಕರರನ್ನು ಖಾಯಂಗೊಳಿಸಬೇಕು ಮತ್ತು ಸ್ಥಗಿತಗೊಂಡಿರುವ ವೇತನವನ್ನು ಬಿಡುಗಡೆ ಮಾಡಬೇಕು ಎಂದು ಹೇಳಿದರು.
ನೌಕರರ ಸಕ್ರಮಾತಿಗಾಗಿ ಶಾಸನವನ್ನು ರೂಪಿಸಬೇಕು. ಮೇಲ್ದಜರ್ೆಗೇರಿಸಿರುವ ಸ್ಥಳೀಯ ಸಂಸ್ಥೆಗಳ ಗ್ರಾಮ ಪಂಚಾಯತಿಯ ನೌಕರರನ್ನು ಪೌರಾಡಳಿತ ನೌಕರರು ಎಂದು ಪರಿಗಣಿಸದೆ ನೌಕರರಿಗೆ ಅನ್ಯಾಯ ಮಾಡಿದ್ದಾರೆ ಎಂದು ಅವರು ತಿಳಿಸಿದರು. ನವಂಬರ್ 2017 ರಿಂದ ಹಂಗಾಮಿ ನೌಕರರ ವೇತನ ಸ್ಥಗಿತಗೊಳಿಸಿರುವ ಕಾರಣದಿಂದ ಅವರ ಜೀವನ ನಿರ್ವಹಣೆಗೆ ತೊಂದರೆ ಉಂಟಾಗಿದೆ ಎಂದು ಹೇಳಿದರು. ಗುರುರಾಜ ದಾಸನಾಳ, ಸೈಯದ್ ಅಲಿ, ರಾಮಣ್ಣ, ಶಿವಪ್ಪ, ಕನಕರಾಯ, ಸಣ್ಣ ಹುಲಿಗೆಮ್ಮ, ಸುಶೀಲಮ್ಮ, ಗಾಳೆಮ್ಮ, ಬಸಮ್ಮ, ನೀಲಮ್ಮ ಧರಣಿಯಲ್ಲಿ ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 