ಹಂಗಾಮಿ ನೌಕರರ ಸಕ್ರಮಾತಿಗೆ ಒತ್ತಾಯಿಸಿ ಧರಣಿ
ಲೋಕದರ್ಶನ ವರದಿ
ಗಂಗಾವತಿ 14: ಹೈದ್ರಾಬಾದ ಕನರ್ಾಟಕ ಪ್ರದೇಶ ವ್ಯಾಪ್ತಿಯ ನಗರ, ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹಂಗಾಮಿ ನೌಕರರ ಸೇವ ಸಕ್ರಮಾತಿಗೆ ಮತ್ತು ಸ್ಥಗಿತಗೊಂಡಿರುವ ವೇತನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಹೈದ್ರಾಬಾದ ಕನರ್ಾಟಕ ಪ್ರದೇಶ ಪೌರ ಸೇವಾ ನೌಕರರ ಸಂಘದ ಸದಸ್ಯರು ಶುಕ್ರವಾರ ನಗರಸಭೆ ಆವರಣದಲ್ಲಿ ಧರಣಿ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ತಾಲೂಕು ಘಟಕದ ಅಧ್ಯಕ್ಷ ರಮೇಶ, ಕೊಪ್ಪಳ ಜಿಲ್ಲೆಯಲ್ಲಿ ಕಳೆದ 30 ವರ್ಷಗಳಿಂದ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರ ಸೇವಾ ನೌಕರರನ್ನು ಖಾಯಂಗೊಳಿಸಬೇಕು ಮತ್ತು ಸ್ಥಗಿತಗೊಂಡಿರುವ ವೇತನವನ್ನು ಬಿಡುಗಡೆ ಮಾಡಬೇಕು ಎಂದು ಹೇಳಿದರು.
ನೌಕರರ ಸಕ್ರಮಾತಿಗಾಗಿ ಶಾಸನವನ್ನು ರೂಪಿಸಬೇಕು. ಮೇಲ್ದಜರ್ೆಗೇರಿಸಿರುವ ಸ್ಥಳೀಯ ಸಂಸ್ಥೆಗಳ ಗ್ರಾಮ ಪಂಚಾಯತಿಯ ನೌಕರರನ್ನು ಪೌರಾಡಳಿತ ನೌಕರರು ಎಂದು ಪರಿಗಣಿಸದೆ ನೌಕರರಿಗೆ ಅನ್ಯಾಯ ಮಾಡಿದ್ದಾರೆ ಎಂದು ಅವರು ತಿಳಿಸಿದರು. ನವಂಬರ್ 2017 ರಿಂದ ಹಂಗಾಮಿ ನೌಕರರ ವೇತನ ಸ್ಥಗಿತಗೊಳಿಸಿರುವ ಕಾರಣದಿಂದ ಅವರ ಜೀವನ ನಿರ್ವಹಣೆಗೆ ತೊಂದರೆ ಉಂಟಾಗಿದೆ ಎಂದು ಹೇಳಿದರು. ಗುರುರಾಜ ದಾಸನಾಳ, ಸೈಯದ್ ಅಲಿ, ರಾಮಣ್ಣ, ಶಿವಪ್ಪ, ಕನಕರಾಯ, ಸಣ್ಣ ಹುಲಿಗೆಮ್ಮ, ಸುಶೀಲಮ್ಮ, ಗಾಳೆಮ್ಮ, ಬಸಮ್ಮ, ನೀಲಮ್ಮ ಧರಣಿಯಲ್ಲಿ ಪಾಲ್ಗೊಂಡಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 