ಮಹರಾಷ್ಟ್ರದ ಜತ್ತ ತಾಲೂಕಿನಲ್ಲಿ ಫೆ.6ರಂದು ನಾಲ್ಕು ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೈದ ಆರೋಪಿಗೆ ಗಲ್ಲು ಶಿಕ್ಷೆ ಒಳಪಡಿಸಬೇಕೆಂದು ಆಗ್ರಹಿಸಿ
Demand hanging for the accused who raped and killed a four-year-old child on February 6 in Maharasht
ಮಹರಾಷ್ಟ್ರದ ಜತ್ತ ತಾಲೂಕಿನಲ್ಲಿ ಫೆ.6ರಂದು ನಾಲ್ಕು ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೈದ ಆರೋಪಿಗೆ ಗಲ್ಲು ಶಿಕ್ಷೆ ಒಳಪಡಿಸಬೇಕೆಂದು ಆಗ್ರಹಿಸಿ
ಮೂಡಲಗಿ 14 : ಮಹರಾಷ್ಟ್ರದ ಜತ್ತ ತಾಲೂಕಿನಲ್ಲಿ ಫೆ.6ರಂದು ನಾಲ್ಕು ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೈದ ಆರೋಪಿಗೆ ಗಲ್ಲು ಶಿಕ್ಷೆಗೆ ಒಳಪಡಿಸಬೇಕೆಂದು ಆಗ್ರಹಿಸಿ ಗುರುವಾರದಂದು ಮೂಡಲಗಿ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮತ್ತು ಸಮೀತಿ ಅಲ್ಪಸಂಖ್ಯಾತರ ಘಟಕ ಹಾಗೂ ವಿವಿದ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟಿಸಿ ಮೂಡಲಗಿ ತಹಶೀಲ್ದಾರ ಶಿವಾನಂದ ಬಬಲಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.ಈ ಸಮಯದಲ್ಲಿ ಡಿಎಸ್ಎಸ್ ರಾಜ್ಯ ಸಂಚಾಲಕ ಸತ್ಯಪ್ಪಾ ಕರವಾಡಿ ಮಾತನಾಡಿ, ಮಹರಾಷ್ಟದ ಬೋರಗಿ ಕರ್ಜಗಿ ಗ್ರಾಮದ 4 ವರ್ಷದ ಕುಮಾರಿ ಮಿಜ್ಜಾ ಫಾರುಕ ಜಾತಗಾರ ಎಂಬ ಮಗು ತೋಟದ ಪಕ್ಕದಲ್ಲಿ ಆಟ ಆಡುವ ಸಮಯದಲ್ಲಿ ಆ ಸಣ್ಣ ಮಗುವಿನ ಮೇಲೆ ದೌರ್ಜನ್ಯ ಎಸಗಿ ಹತ್ಯೆ ಮಾಡಿ ಪಾಂಡು ಸೋಮಲಿಂಗ ಕಳ್ಳಿ ಆರೋಪಿಯನ್ನು ಗಲ್ಲು ಶಿಕ್ಷೆಗೆ ಒಳಪಡಿಸಬೇಕು. ಇಂತಹ ವ್ಯಕ್ತಿಗಳು ಸಮಾಜದಲ್ಲಿ ಇದ್ದರೆ ಮುಂದೆ ಸಾಮಾನ್ಯ ಹೆಣ್ಣು ಮಕ್ಕಳು ಜೀವನ ಸಾಗಿಸುವುದು ತುಂಬಾ ಕಷ್ಟಕರವಾಗುತ್ತದೆ. ಕಾರಣ ಪಾಂಡು ತಂ ಸೋಮಲಿಂಗ ಕಳ್ಳಿಗೆ ಯಾವುದೇ ರೀತಿಯ ದಯಮಯ ತೋರಿಸದೆ ಗಲ್ಲು ಶಿಕ್ಷೆಗೆ ಒಳಪಡಿಸಿ ಅನ್ಯಾಯವಾದ ಚಿಕ್ಕ ಮಗುವಿಗೆ ನ್ಯಾಯ ದೊರಕಿಸಿ ಕೊಡಬೇಕು ಎಂದು ಮನವಿ ಮೂಲಕ ಆಗ್ರಹಿಸಿದರು. ಪುರಸಭೆ ಸದಸ್ಯ ರವೀಂದ್ರ ಸಣ್ಣಕ್ಕಿ, ಡಿಎಸ್ಎಸ್ ಮುಖಂಡರಾದ ಬಸವರಾಜ್ ಕಾಡಾಪುರ, ಮಾದೇವ ಮಾಸಣ್ಣವರ ಮಾತನಾಡಿ, ಸಣ್ಣ ಮಗುವಿನ ಮೇಲೆ ದೌರ್ಜನ್ಯ ಎಸಗಿ ಹತ್ಯೆ ಮಾಡಿ ಪಾಂಡು ಕಳ್ಳಿಗೆ ಗಲ್ಲು ಶಿಕ್ಷೆಗೆ ಒಳಪಡಿಸದಿದರೆ ರಾಜ್ಯಾದ್ಯಾಂತ ಉಗ್ರಹೋರಾಟ ಮಾಡುವುದುದಾಗಿ ಹೇಳಿದರು. ಈ ಸಮಯದಲ್ಲಿ ಡಿಎಸ್ಎಸ್ ಮುಖಂಡರು ಮತ್ತು ಪದಾಧಿಕಾರಿಗಳಾದ ಮರೇಪ್ಪ ಮರಿಯಪ್ಪಗೋಳ ರಂಜಾನ ಬಿಜಾಪುರ ಅಶೋಕ ಶಿದ್ದೀಲಿಂಗಪ್ಪಗೋಳ ಪ್ರಭಾಕರ ಮಂಟುರ, ಹಸನಸಾಬ ಮುಗಾಟಖಾನ ಶೆಂಕರ ತಳವಾರ, ಮದರಾಸಾಬ ಜಕಾತಿ, ಸಂಜು ಹಾದಿಮನಿ ಡಾ.ರಾಜು ಚುಟುಕುಸಾಬ ಮಂಟುರ, ಈರ್ಪ ಢವಳೇಶ್ವರ ಬಂದೇನವಾಜ ಶೇಖ ಯಲಪ್ಪ ಬಾಳವಗೋಳ ತುಕಾರಾಮ್ ಮಾದರ, ಸಲೀಮ್ ಸೈದ, ಸೈಪನ್ ಲಕ್ಷಮೆಶ್ವರ ಹಾಜಿಸಬಾ ಬಿಜಾಪುರ ಹಾಜಿಸಬಾ ಜಾತಾಗಾರ ಅಲ್ಲಾ ಶೇಖ ಮಹಿಬುಬ ಮನಗುಳ್ಳಿ, ಅನೀಲ ಗಸ್ತಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 