ಭಾರತ ಸರ್ಕಾರ ಕುಟುಂಬ ರಾಜಕಾರಣ ನಿಯತ್ರಣ ಕಾಯ್ದೆ ಜಾರಿಗೊಳಿಸಬೇಕೆಂದು ಒತ್ತಾಯ
Demand that the Government of India implement the Family Politics Control Act
ಭಾರತ ಸರ್ಕಾರ ಕುಟುಂಬ ರಾಜಕಾರಣ ನಿಯತ್ರಣ ಕಾಯ್ದೆ ಜಾರಿಗೊಳಿಸಬೇಕೆಂದು ಒತ್ತಾಯ
ರಾಣೇಬೆನ್ನೂರು 27 :ನಗರದ ತಹಶಿಲ್ದಾರರ ಕಛೇರಿ ಮುಂದೆ ಮಾತೃಭೂಮಿ ಗ್ರಾಮೀಣ ಅಭಿವೃದ್ಧಿ ಸೇವಾ ಸಂಸ್ಥೆಯಿಂದ ಪ್ರತಿಭಟನೆ ಮಾಡಿ ಭಾರತ ಸರ್ಕಾರ ಕುಟುಂಬ ರಾಜಕಾರಣ ನಿಯಂತ್ರಣ ಕಾಯ್ದೆ ಜಾರಿಗೊಳಿಸುವಂತೆ ರಾಷ್ಟ್ರಪತಿಗಳಿಗೆ ಮತ್ತು ಪ್ರದಾನ ಮಂತ್ರಿಗಳಿಗೆ ತಹಶಿಲ್ದಾರರ ಮೂಲಕ ಮನವಿ ಸಲ್ಲಿಸಲಾಯಿತು.ಮಾತೃಭೂಮಿ ಗ್ರಾಮೀಣ ಅಭಿವೃದ್ಧಿ ಸೇವಾ ಸಂಸ್ಥೆಯ ಮುಖ್ಯಸ್ಥರಾದ ಮಲ್ಲಿಕಾರ್ಜುನ ಬ. ತೆಗ್ಗಿನ ಮಾತನಾಡಿ, ಭಾರತದಲ್ಲಿ ದಿನದಿಂದ ದಿನಕ್ಕೆ ಕುಟುಂಬ ರಾಜಕಾರಣ ವಿಸ್ತರಣೆಯಾಗುತ್ತಿದೆ.
ಇದರಿಂದ ಸಮಾಜದಲ್ಲಿ ಅಸಮಾನತೆ ಉಂಟಾಗುತ್ತದೆ. ಆದ್ದರಿಂದ ಭಾರತ ಸರ್ಕಾರ ಕುಟುಂಬ ರಾಜಕಾರಣ ನಿಯತ್ರಣ ಕಾಯ್ದೆ ಜಾರಿಗೊಳಿಸಬೇಕೆಂದು ಒತ್ತಾಯಿಸಿದರು.ಇದೇ ವೇಳೆ ಬಸಣ್ಣ ದೊಡ್ಡಕೊಪ್ಪಡ್, ರಘು ಗೊಂದಕರ್, ನಾಗಪ್ಪ ಕರೂರು, ಸೋಮರೆಡ್ಡಿ, ಶಿವು ಕಡೂರು, ಮಂಜು ಚಳಗೇರಿ, ನಾಗರಾಜ್ ಸಾಳೇರ್, ಈರ್ಪ ಇಟಗಿ ಮತ್ತಿತರರು ಪಾಲ್ಗೊಂಡಿದ್ದರು.ಬಾಕ್ಸ್ಬೇಡಿಕೆಗಳು:ಒಂದು ಕುಟುಂಬದಲ್ಲಿ ಒಬ್ಬ ಸದಸ್ಯನಿಗೆ ಸ್ಪರ್ಧಿಸುವಂತೆ ಕಡ್ಡಾಯಗೊಳಿಸಬೇಕು.ಸಾರ್ವತ್ರಿಕ ಚುನಾವಣೆಯಲ್ಲಿ ಕನಿಷ್ಠ ಪದವಿ ವಿದ್ಯಾರ್ಹತೆ ಕಡ್ಡಾಯಗೊಳಿಸಬೇಕು.ಭಾರತದಲ್ಲಿ ಎಲ್ಲಾ ಪ್ರಜೆಗಳಿಗೆ ಮತದಾನ ಕಡ್ಡಾಯಗೊಳಿಸಬೇಕು.ಭಾರತದಲ್ಲಿ ಚುನಾವಣೆಗೆ ಸ್ಪರ್ಧಿಸಲು ಗರಿಷ್ಠ ವಯೋಮಿತಿಯನ್ನು ಕಡ್ಡಾಯಗೊಳಿಸಬೇಕು. ಎಂದು ಸಲ್ಲಿಸಿರುವ ಮನವಿಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 