ಸಂಗಮ ವೃತ್ತದಲ್ಲಿ ಅಂಬೇಡ್ಕರ ಮೂರ್ತಿ ನಿರ್ಮಿಸಲು ಆಗ್ರಹ
Demand to build Ambedkar statue at Sangama Circle
ರಾಣಿಬೆನ್ನೂರ 25: ಸ್ಥಳೀಯ ಸಂಗಮ ವೃತ್ತದಲ್ಲಿ ಡಾ.ಬಿ.ಆರ್.ಅಂಬೇಡ್ಕರ ಮೂರ್ತಿ ನಿರ್ಮಿಸಿ, ಆ ವೃತ್ತಕ್ಕೆ ಅಂಬೇಡ್ಕರವರ ಹೆಸರನ್ನು ಅಧಿಕೃತವಾಗಿ ನಾಮಫಲಕ ಅಳವಡಿಸಬೇಕು ಎಂದು ಆಗ್ರಹಿಸಿ ಭೀಮ್ ಆರ್ಮಿ ಕರ್ನಾಟಕ ಏಕತಾ ಮಿಷನ್ ತಾಲೂಕು ಘಟಕದ ಸದಸ್ಯರುಗಳು ಶಾಸಕ ಪ್ರಕಾಶ ಕೋಳಿವಾಡರಿಗೆ ಹಾಗೂ ನಗರಸಭಾ ಅಧ್ಯಕ್ಷೆ ಚಂಪಿಕಾ ಬಿಸಲಳ್ಳಿ ಮತ್ತು ಪೌರಾಯುಕ್ತ ಎಫ್ ಐ ಇಂಗಳಗಿಯವರಿಗೆ ಮನವಿ ಸಲ್ಲಿಸಿದರು.
Hide quoted text ನಗರದ ಸಂಗಮ ವೃತ್ತದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಪುತ್ತಳಿ ನಿರ್ಮಿಸಿ ಅಂಬೇಡ್ಕರ್ ವೃತ್ತ ಎಂದು ನಾಮಕರಣ ಮಾಡಬೇಕು ಎಂದು ಆಗ್ರಹಿಸಿ ಸ್ಥಳೀಯ ಭೀಮಾ ಆರ್ಮಿ ಕರ್ನಾಟಕ ಏಕತಾ ಮಿಷನ್ ತಾಲೂಕ ಸಮಿತಿಯ ವತಿಯಿಂದ ನಗರಸಭೆಗೆ ಅನೇಕ ಬಾರಿ ಮನವಿ ಅರ್ಿಸಿದರೂ ಏನೂ ಪ್ರಯೋಜನವಾಗಿಲ್ಲ ಎಂದು ಸದಸ್ಯರುಗಳು ದೂರಿದರು.
ಈ ಹಿಂದೆ ದಲಿತ ಸಂಘರ್ಷ ಸಮಿತಿ ಮತ್ತು ದಲಿತ ಒಕ್ಕೂಟ ಸಮಿತಿಯವರು ಅನೇಕ ಬಾರಿ ನಗರಸಭೆಗೆ ಅರ್ಜಿ ಸಲ್ಲಿಸಿದರೂ ಏನು ಕ್ರಮ ಕೈಗೊಂಡಿಲ್ಲ. ಕಳೆದ ಎರಡು ವರ್ಷಗಳಿಂದ ಮೂರ್ತಿ ಪ್ರತಿಷ್ಠಾಪನೆ, ವೃತ್ತ ನಾಮಕರಣಕ್ಕಾಗಿ ಧರಣಿ, ಪ್ರತಿಭಟನೆ, ಉಪವಾಸ ಸತ್ಯಾಗ್ರಹ, ಹೋರಾಟ ಮಾಡಿದರೂ ಪ್ರಯೋಜನವಾಗಿಲ್ಲದಿರುವುದು ನೋವಿನ ಸಂಗತಿಯಾಗಿದೆ.
ಈ ಕುರಿತು ನಗರಸಭೆಯ ಸಾಮಾನ್ಯ ಸಭೆಯಲ್ಲಿ ಚರ್ಚೆ ಮಾಡದಿರುವುದು ಅಂಬೇಡ್ಕರ್ ಅವರಿಗೆ ಮಾಡಿದ ಅಪಮಾನವಾಗಿದೆ ಎಂದವರು ದೂರಿದರು. ಇನ್ನು ಮುಂದಾದರು ನಗರಸಭೆಯವರು ತುರ್ತು ಕ್ರಮ ಕೈಗೊಂಡು ಈ ಬೇಡಿಕೆಯನ್ನು ಈಡೇರಿಸಬೇಕೆಂದು ಸದಸ್ಯರುಗಳು ಆಗ್ರಹಿಸಿದರು ಸಮಿತಿಯ ಅಧ್ಯಕ್ಷ ನಿಖಿತ್ ಮೆಣಸಿನಹಾಳ, ನವೀನ ಎಂ.ಎಂ., ಪ್ರವೀಣ ಮುದೇನೂರ, ಮಾಲತೇಶ ಗುಜ್ಜರ, ಭಗವಾನ ಮುದೇನೂರ, ಮಂಜಪ್ಪ ಗುಡ್ಡಣ್ಣನವರ, ಶಿವರಾಜ ಪಿ., ಹಾಲೇಶ ಹಲವಾಗಲು, ಅನಿಲ ಪೂಜಾರ, ಗದಿಗೆಪ್ಪ, ಪುಟ್ಟಪ್ಪ ಜಲ್ಲಾವರ, ಚೂಡಾಮಣಿ ಮತ್ತಿತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 