ಅಥಣಿ, ಕಾಗವಾಡ ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಲು ಆಗ್ರಹ: ಶ್ರೀಮಂತ ಪಾಟೀಲ
Demand to declare Athani and Kagwad taluks drought-hit: Shrimant Patil
ಸಂಬರಗಿ, ಸೆ. 2: ಮಾಜಿ ಸಚಿವ ಹಾಗೂ ಅಥಣಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಶ್ರೀಮಂತ ಪಾಟೀಲ ಅವರು ಪಕ್ಷದ ಕಾರ್ಯಕರ್ತರೊಂದಿಗೆ ಕಿಳೇಗಾಂವ್ ಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಕಾರ್ಯಕರ್ತರೊಂದಿಗೆ ರಾಜಕೀಯ ವಿಚಾರಗಳ ಕುರಿತು ಚರ್ಚೆ ನಡೆಸಿದರು.
ಕಿಳೇಗಾಂವ್ನಲ್ಲಿ ಮಾತನಾಡಿದ ಶ್ರೀಮಂತ ಪಾಟೀಲ, ಮುಂಬರುವ ವಿಧಾನಸಭೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳಿಗೆ ಬಿಜೆಪಿ ಪಕ್ಷ ಬಲಿಷ್ಠವಾಗಿದೆ. ಕಾಗವಾಡ ವಿಧಾನಸಭಾ ಕ್ಷೇತ್ರದಲ್ಲಿಯೂ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು.
ಸರ್ಕಾರ ಕೂಡಲೇ ಈ ಎರಡೂ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಆರ್.ಎಂ. ಪಾಟೀಲ, ಈಶ್ವರ ಕುಂಬಾರ, ಶಿರೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಬಾಳು ಹಜಾರೆ, ನಾನಾಸಾಹೇಬ ಅವತಾಡೆ, ರಮೇಶ ಅವಳೇಕರ ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.
ನಂತರ ಕಿಳೇಗಾಂವ್ ಬಸವೇಶ್ವರ ದೇವಸ್ಥಾನದಲ್ಲಿ ದರ್ಶನ ಪಡೆದ ಮಾಜಿ ಸಚಿವ ಶ್ರೀಮಂತ ಪಾಟೀಲ, ಆರ್.ಎಂ. ಪಾಟೀಲ, ನಾನಾಸಾಹೇಬ ಅವತಾಡೆ, ಬಾಳು ಹಜಾರೆ ಸೇರಿದಂತೆ ಗಣ್ಯರನ್ನು ಸನ್ಮಾನಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 