ಪರವಾನಿಗೆ ಭೂ ಮಾಪಕರ ಬೇಡಿಕೆ ಈಡೇರಿಸಲು ಆಗ್ರಹ

ಪರವಾನಿಗೆ ಭೂ ಮಾಪಕರ ಬೇಡಿಕೆ ಈಡೇರಿಸಲು ಆಗ್ರಹ       Demand to fulfill the demand of licensed land surveyors

ಲೋಕದರ್ಶನ ವರದಿ 

ಹೂವಿನಹಡಗಲಿ 02:   ಭೂಮಾಪಕರ ಕೊರತೆಯಿಂದ ರೈತರು ಜಮೀನು ಅಳತೆ, ಗಡಿ ಗುರುತು, ದಾಖಲೆ ತಿದ್ದುಪಡಿ ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದು, ರೈತರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಒದಗಿಸಬೇಕು ಎಂದು ಶ್ರೀಧರ ನಾಯ್ಕ ಒತ್ತಾಯಿಸಿದರು. ಪಟ್ಟಣದ  ಪತ್ರಿಕಾ  ಭವನದಲ್ಲಿ  ಬುಧವಾರ ಪತ್ರಿಕಾ  ಗೋಷ್ಠಿಯಲ್ಲಿ ಮಾತನಾಡಿದರು. ಭೂಮಾಪಕರ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಿ, ರೈತರಿಗೆ ಸಕಾಲಕ್ಕೆ ಸೇವೆ ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ಜೊತೆಗೆ ಆಸ್ತಿ ಭದ್ರತೆ, ಸಾಮಾಜಿಕ ನ್ಯಾಯ ಹಾಗೂ ಗ್ರಾಮೀಣ ಜನರ ಮೂಲಭೂತ ಹಕ್ಕುಗಳನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಗಂಭೀರವಾಗಿ ಕ್ರಮವಹಿಸಬೇಕು ಎಂದು ಅವರು ಹೇಳಿದರು.

ರೈತರು ಅನಗತ್ಯವಾಗಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ತಪ್ಪಿಸಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕೂಡ ತ್ವರಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಆಗ್ರಹಿಸಿದರು.ಈ ಸಂದರ್ಭದಲ್ಲಿ ಕಬ್ಬು ಬೆಳೆಗಾರರ ಸಂಘದ ತಾಲೂಕು ಅಧ್ಯಕ್ಷ ಬೆನ್ನೂರು ಹಾಲೇಶ, ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಉಪಾಧ್ಯಕ್ಷ ವಿ.ಬಿ. ಸೋಮಶೇಖರ​‍್ಪ, ಜಿಲ್ಲಾಧ್ಯಕ್ಷ ಶಿವಾನಂದಪ್ಪ, ತಾಲೂಕು ಅಧ್ಯಕ್ಷ ಶಂಭುನಾಥ ಸೇರಿದಂತೆ ಇತರರು ಉಪಸ್ಥಿತರಿದ್ದರು.