ಪಂಚಮಸಾಲಿ ಸಮಾಜಕ್ಕೆ ಐದು ಸಚಿವ ಸ್ಥಾನ ನೀಡಲು ಆಗ್ರಹ

ಪಂಚಮಸಾಲಿ ಸಮಾಜಕ್ಕೆ ಐದು ಸಚಿವ ಸ್ಥಾನ ನೀಡಲು ಆಗ್ರಹ  Demand to give five ministerial posts to Panchamasali Samaj

ಲೋಕದರ್ಶನ ವರದಿ 

ವಿಜಯಪುರ  30: ಪಂಚಮಸಾಲಿ ಸಮಾಜಕ್ಕೆ ಸಚಿವ ಸಂಪುಟದಲ್ಲಿ ಸಮರ​‍್ಕ ಪ್ರಾತಿನಿಧ್ಯ ನೀಡುವಂತೆ ಆಗ್ರಹಿಸಿ, ಕನಿಷ್ಠ ಐದು ಮಂದಿ ಪಂಚಮಸಾಲಿ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂದು ಸಮಾಜದ ಮುಖಂಡ ಸುರೇಶ್ ಶಂಕರಗೌಡ ಬಿರಾದಾರ ಒತ್ತಾಯಿಸಿದರು.  

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಪಂಚಮಸಾಲಿ ಸಮಾಜವನ್ನು ಕಡೆಗಣಿಸಿರುವುದು ಕಾಂಗ್ರೆಸ್ನ ದೊಡ್ಡ ಪ್ರಮಾದವಾಗಿದೆ. ಎರಡನೇ ಹಂತದ ವಿಸ್ತರಣೆಯಲ್ಲಿ ಶಿವಾನಂದ ಪಾಟೀಲ, ಅಶೋಕ ಮನಗೂಳಿ, ರಾಜು ಕಾಗೆ, ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ವಿಜಯಾನಂದ ಕಾಶಪ್ಪನವರ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.  

ಬೇಡಿಕೆ ಈಡೇರಿಸದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು. 2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ತಕ್ಕ ಉತ್ತರ ನೀಡಲಾಗುವುದು ಎಂದು ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ಶ್ರೀಶೈಲ ಪಾಟೀಲ, ಡಾ. ಶಿವಾನಂದ ರೇಶ್ಮಿ, ಗಣೇಶ ಮಣೂರ ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.