ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ
Demand to grant a ministerial post to Kampli MLA J.N. Ganesh
ಲೋಕದರ್ಶನ ವರದಿ
ಕಂಪ್ಲಿ, 10: ಕ್ಷೇತ್ರ ಸೇರಿದಂತೆ ರಾಜ್ಯದ ಜನರ ನಾಡಿಮಿಡಿತ ಅರಿತಿರುವ ಶಾಸಕ ಜೆ.ಎನ್. ಗಣೇಶ್ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಜನಸೇವೆಗೆ ಮತ್ತಷ್ಟು ಅವಕಾಶ ಕಲ್ಪಿಸಬೇಕು ಎಂದು ರಾಮಸಾಗರ ಗ್ರಾಮದ ಗಂಗಾಮತ ಸಮಾಜದ ಅಧ್ಯಕ್ಷ ಬಿ. ಮಂಜುನಾಥ ಒತ್ತಾಯಿಸಿದರು. ಅವರು ತಾಲೂಕಿನ ರಾಮಸಾಗರ ಗ್ರಾಮದಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿ, ಶಾಸಕ ಜೆ.ಎನ್. ಗಣೇಶ್ ಅವರು ಶಾಸಕರಾದ ಬಳಿಕ ಕಳೆದ ಎಂಟು ವರ್ಷಗಳಲ್ಲಿ ಸಾಕಷ್ಟು ಅನುದಾನಗಳನ್ನು ತಂದು ಗ್ರಾಮ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಜನತೆಗೆ ಅಗತ್ಯವಾದ ಮೂಲಸೌಕರ್ಯ ಹಾಗೂ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿದರು.
ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಅವುಗಳ ಪರಿಹಾರಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿರುವ ಶಾಸಕರ ಕಾರ್ಯ ಶ್ಲಾಘನೀಯವಾಗಿದೆ. ಸಚಿವ ಸ್ಥಾನ ದೊರೆತರೆ ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವುದರ ಜೊತೆಗೆ ರಾಜ್ಯದ ಜನರ ಸಂಕಷ್ಟಗಳಿಗೆ ಸಮಯೋಚಿತವಾಗಿ ಸ್ಪಂದಿಸಲು ಸಾಧ್ಯವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್, ರಾಜ್ಯದ ಹಿರಿಯ ನಾಯಕರು ಹಾಗೂ ಮುಖ್ಯಮಂತ್ರಿ ಅವರು ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಅವರಿಗೆ ಸಚಿವ ಸಂಪುಟದಲ್ಲಿ ಅವಕಾಶ ನೀಡಬೇಕು ಎಂದು ಬಿ. ಮಂಜುನಾಥ ಆಗ್ರಹಿಸಿದರು.
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ 