ತಿಪ್ಪಣ್ಣಪ್ಪ ಕಮಕನೂರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ

ತಿಪ್ಪಣ್ಣಪ್ಪ ಕಮಕನೂರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ  Demand to grant a ministerial post to Thippannappa Kamakanuru

ಕಂಪ್ಲಿ, ಜು.16: ರಾಜ್ಯದಲ್ಲಿ ಗಂಗಾಮತ (ಬೆಸ್ತ) ಸಮುದಾಯಕ್ಕೆ ಸಮರ​‍್ಕ ರಾಜಕೀಯ ಪ್ರಾತಿನಿಧ್ಯ ನೀಡುವ ಉದ್ದೇಶದಿಂದ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರಿಗೆ ಸಚಿವ ಸ್ಥಾನ ನೀಡಬೇಕು ಎಂದು ಹಮ್ಮುನೂರು-ಸುಗೂರು ಗ್ರಾಮದ ಗಂಗಾಪರಮೇಶ್ವರಿ ಸಮಾಜ ಸೇವಾ ಟ್ರಸ್ಟ್‌ ಅಧ್ಯಕ್ಷ ಎಂ. ವೀರೇಶ್ ಆಗ್ರಹಿಸಿದರು.  ಹಮ್ಮುನೂರು-ಸುಗೂರು ಗ್ರಾಮದ ಗಂಗಾಪರಮೇಶ್ವರಿ ದೇವಸ್ಥಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸುಮಾರು 40 ರಿಂದ 50 ಲಕ್ಷಕ್ಕೂ ಹೆಚ್ಚು ಗಂಗಾಮತ (ಬೆಸ್ತ) ಸಮುದಾಯದ ಜನಸಂಖ್ಯೆ ಇದ್ದರೂ, ಸಮುದಾಯವು ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಹಿಂದುಳಿದಿದೆ ಎಂದು ಹೇಳಿದರು.  

ಸಮುದಾಯದ ಅಭಿವೃದ್ಧಿಗೆ ಹಾಗೂ ಅದರ ಧ್ವನಿಯಾಗಿ ರಾಜ್ಯ ಮಟ್ಟದಲ್ಲಿ ಕಾರ್ಯನಿರ್ವಹಿಸಲು ಸಮರ್ಥ ನಾಯಕತ್ವದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ನಿರಂತರವಾಗಿ ಜನಪರ ಕೆಲಸ ಮಾಡುತ್ತಿರುವ ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರಿಗೆ ಸಚಿವ ಸ್ಥಾನ ನೀಡುವ ಮೂಲಕ ಗಂಗಾಮತ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಅವರು ಒತ್ತಾಯಿಸಿದರು.  ಈ ಸಂದರ್ಭದಲ್ಲಿ ಗಂಗಾಮತ ಸಮುದಾಯದ ಮುಖಂಡರಾದ ದೊಡ್ಡಬಸಪ್ಪ ಬಾರಿಕೇರಿ, ಮಲ್ಲಿಕಾರ್ಜುನ ತಿಪ್ಪೇಶಿ, ಕೆ. ಶಿವಕುಮಾರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.