ಒಳ ಮೀಸಲಾತಿ ಜಾರಿಗೆ ತರಲು ಒತ್ತಾಯ
Demand to implement internal reservation
ಹೂವಿನಹಡಗಲಿ 18: ನ್ಯಾ.ನಾಗಮೋಹನದಾಸ್ ಆಯೋಗ ವರದಿಯನ್ನು ಅಂಗೀಕರಿಸಿ ಒಳಮೀಸಲಾತಿ ಶೀಘ್ರವಾಗಿ ಜಾರಿಗೊಳಿಸಲು ವಿಧಾನಸಭೆಯಲ್ಲಿ ಬೆಂಬಲ ನೀಡಬೇಕು ಹಾಗೂ ಮುಖ್ಯಮಂತ್ರಿ ಮೇಲೆ ಒತ್ತಡ ತರುವಂತೆ ಒತ್ತಾಯಿಸಿ ಸಮಿತಿಯ ಪದಾಧಿಕಾರಿಗಳು, ಮುಖಂಡರು ಶಾಸಕರ ಜನ ಸಂಪರ್ಕ ಕಚೇರಿ ಯಲ್ಲಿ ಆಪ್ತ ಸಹಾಯಕ ಅರುಣಿ ಸುರೇಶ್ ಸೋಮವಾರ ಮನವಿ ಸಲ್ಲಿಸಿದರು.
ಪರಿಶಿಷ್ಟ ಜಾತಿಯ ಎಲ್ಲ ಸಮುದಾಯಗಳಿಗೂ ಸಾಮಾಜಿಕ ನ್ಯಾಯ ದೊರಕಿಸಿಕೊಡುವ ಜವಾಬ್ದಾರಿ ಸರ್ಕಾರದ ಮೇಲಿದೆ. ಒಳಮೀಸಲಾತಿಯನ್ನು ರಾಜ್ಯ ಸರ್ಕಾರವೇ ಜಾರಿಗೊಳಿಸಬಹುದು ಎಂದು ಸುಪ್ರಿಂಕೋರ್ಟ್ ತೀರ್ು ನೀಡಿ ವರ್ಷ ಕಳೆದರೂ ಸರ್ಕಾರ ಕಾಲಹರಣ ಮಾಡಿಕೊಂಡಿರುವುದು ಸಮುದಾಯದ ನಿರ್ಲಕ್ಷ್ಯಕ್ಕೆ ಕಾರಣವಾಗಿದೆ ಎಂದರು. ಒಳಮೀಸಲಾತಿ ಜಾರಿ ಆಗುವವರೆಗೆ ಉದ್ಯೋಗ. ಅವಕಾಶಗಳನ್ನು ನಿಲ್ಲಿಸಲಾಗಿದೆ ಕೂಡಲೇ ಸಿಎಂ. ಸಿದ್ದರಾಮಯ್ಯನವರು ಕಾಲಹರಣ ಮಾಡದೇ 19ರಂದು ನಡೆಯುವ. ಸಂಪುಟ ಸಭೆಯಲ್ಲಿ ಜಾರಿಗೊಳಿಸದೇ ಸಭೆಯಲ್ಲಿ ಸಮಿತಿ ರಚಿಸಿದರೆ ಉಗ್ರ ಹೋರಾಟ ಮಾಡುವುದಾಗಿದಾಗಿ ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ ಸಮಿತಿ ಅಧ್ಯಕ್ಷ ಕೆ.ದುರುಗೇಶ, ಎಸ್.ನಿಂಗರಾಜ, ಲಲಿತಮ್ಮ, ಪಿ.ನಿಂಗಪ್ಪ, ಮಂಜಪ್ಪ, ಕಗ್ಗಲಪ್ಪ ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 