ಮುದ್ದೇಬಿಹಾಳ, ದೇವರಹಿಪ್ಪರಗಿ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲು ಆಗ್ರಹ
Demand to include Muddebihal and Devarahipparagi taluks in the drought-hit list
ತಾಳಿಕೋಟೆ ಸೆ.11: ತಾಲೂಕಿಗೆ ಸೇರಿದ ಮುದ್ದೇಬಿಹಾಳ ಹಾಗೂ ದೇವರಹಿಪ್ಪರಗಿ ತಾಲೂಕುಗಳನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟಿರುವುದನ್ನು ವಿರೋಧಿಸಿ, ಅವುಗಳನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಿ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ಗುರುವಾರ ಅಹೋರಾತ್ರಿ ಧರಣಿ ಆರಂಭಿಸಲಾಯಿತು.
ಮುದ್ದೇಬಿಹಾಳ ಹಾಗೂ ದೇವರಹಿಪ್ಪರಗಿ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸದಿದ್ದರೆ ತಾಳಿಕೋಟೆ ಪಟ್ಟಣ ಬಂದ್ಗೆ ಕರೆ ನೀಡಲಾಗುವುದು. ಬಳಿಕ ವಿವಿಧ ರೀತಿಯ ಹೋರಾಟ ನಡೆಸಿ ಉಪವಾಸ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾಧ್ಯಕ್ಷ ಉಮೇಶ ವಾಲಿಕಾರ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಧರಣಿಯಲ್ಲಿ ಸಂಘದ ಉಪಾಧ್ಯಕ್ಷ ರಾಮನಗೌಡ ಹಾದಿಮನಿ, ಮಲ್ಲನಗೌಡ ಬಿರಾದಾರ, ಭೀಮನಗೌಡ ಬಿರಾದಾರ, ನಾನಾಗೌಡ ಮುದ್ನೂರ, ಮಾಂತಗೌಡ ಮುದ್ನೂರ, ಶರಣಗೌಡ ಅಂಗಡಗೇರಿ, ಮಡಿವಾಳಪ್ಪ ಕಲಬುರ್ಗಿ, ಅಪ್ಪಾಸಾಹೇಬ ಕೋಳೂರ, ಸೋಮನಗೌಡ ಹಾದಿಮನಿ, ಮಲ್ಲನಗೌಡ ಕೊಡಗಾನೂರ, ಸುಭಾಷ ಗುಂದಗಿ, ವೆಂಕನಗೌಡ ಬಿರಾದಾರ, ಶಾಂತಗೌಡ ಬಿರಾದಾರ, ಗುರುಣಗೌಡ ಬಿರಾದಾರ, ಮಲ್ಲಿಕಾರ್ಜುನ ನಾವಿ, ಹುಸೇನಸಾಬ ಇನಾಮದಾರ, ಬಸಣ್ಣಉಪ್ಪಲದಿನ್ನಿ, ಅಪ್ಪಣಗೌಡ ಬಿರಾದಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 