ಎಲ್ಲ ದೇವದಾಸಿ ಮಹಿಳೆಯರ ಕುಟುಂಬದ ಸದಸ್ಯರನ್ನು ಗಣತಿಯ ಪಟ್ಟಿಗೆ ಸೇರಿಸಲು ಆಗ್ರಹ
Demand to include family members of all Devadasi women in the census list
ಕೊಪ್ಪಳ 18: ದಿ.18ರಂದು ಕೊಪ್ಪಳ ಜಿಲ್ಲೆಯಲ್ಲಿ ಜಿಲ್ಲೆಯಾದ್ಯಂತ ಗಣತಿ ಪಟ್ಟಿಯಿಂದ ಆಚೆ ಇರುವ ದೇವದಾಸಿ ಮಹಿಳೆಯರು ಹಾಗೂ ಅವರ ಕುಟುಂಬಗಳ ಸದಸ್ಯರನ್ನು ಕೂಡಲೇ ಗಣತಿ ಪಟ್ಟಿ ಪುನರ್ವಸತಿಗೆ ಅಗತ್ಯ ಕ್ರಮ ವಹಿಸಲು ಕೋರಿ ಮತ್ತು ವಿಶೇಷ ಕ್ರಮ ವಹಿಸಿ 2026 ರ ಬಜೆಟ್ ನಲ್ಲಿ ಈ ಎಲ್ಲರಿಗೂ ಎಲ್ಲಾ ದೇವದಾಸಿ ಮಹಿಳೆಯರ ಕುಟುಂಬದಂತೆ ಸೌಲಭ್ಯಗಳು ದೊರೆಯುವಂತೆ ಕ್ರಮವಹಿಸಲು ಗಣತಿ ಪಟ್ಟಿಯಾಚೆ ಇರುವ ಎಲ್ಲ ದೇವದಾಸಿ ಮಹಿಳೆಯರನ್ನು ಅವರ ಮೂರು ತಲೆಮಾರು ಕುಟುಂಬದ ಸದಸ್ಯರನ್ನು ಅತೀ ಶೀಘ್ರವಾಗಿ ಗಣತಿಯ ಪಟ್ಟಿಗೆ ಸೇರಿಸಲು ವಿಶೇಷ ಕ್ರಮ ಜರುಗಿಸಲು ಒತ್ತಾಯಿಸಿ ಸಿದ್ದರಾಮಯ್ಯರವರು ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ ವಿಧಾನಸೌಧ ಬೆಂಗಳೂರು, ಡಾಕ್ಟರ್ ಎಚ್ ಸಿ ಮಹದೇವಪ್ಪ ಸಚಿವರು ಸಮಾಜ ಕಲ್ಯಾಣ ಇಲಾಖೆ ಕರ್ನಾಟಕ ಸರ್ಕಾರ ವಿಧಾನಸೌಧ ಬೆಂಗಳೂರು. ಲಕ್ಷ್ಮಿ ಹೆಬ್ಬಾಳ್ಕರ್ ರವರು ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಕರ್ನಾಟಕ ಸರ್ಕಾರ ವಿಧಾನಸೌಧ ಬೆಂಗಳೂರು. ರವರಿಗೆ ಮಾನ್ಯ ಜಿಲ್ಲಾಧಿಕಾರಿಗಳು ಕೊಪ್ಪಳ ರವರ ಮೂಲಕ ಮನವಿ ಸಲ್ಲಿಸಲಾಯಿತು.
ಹೋರಾಟದ ನೇತೃತ್ವ. ರಾಜ್ಯಾಧ್ಯಕ್ಷರು ಜಿ ಹುಲಿಗೆಮ್ಮ. ಮಕ್ಕಳ ಹೋರಾಟ ಸಮಿತಿ ರಾಜ್ಯ ಅಧ್ಯಕ್ಷರು ಮಂಜುನಾಥ ಡಗ್ಗಿಜಿಲ್ಲಾ ಖಜಾಂಚಿ ಸುಂಕಪ್ಪ ಗದಗ್. ಅಯ್ಯಮ್ಮ. ಮಲ್ಲಮ್ಮ ಮಠದ. ಸೋಮವ್ವ ಬಿಸರಳ್ಳಿ. ಹಂಸವ್ವ ಗಿಣಿಗೇರಿ. ಕೆಂಚವ್ವ ಕರ್ಕೇಹಳ್ಳಿ.ದುರ್ಗಮ್ಮ. ಹನುಮಂತಿ. ಉಪಸ್ಥಿತರಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 