ರೈತರ ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆಗೆ ಖರೀದಿ ಕೇಂದ್ರ ಆರಂಭಿಸಲು ಒತ್ತಾಯ
Demand to start a purchase center at a support price for the crops grown by farmers
ಹೂವಿನಹಡಗಲಿ 12 : ಮೆಕ್ಕೆಜೋಳ, ಭತ್ತ, ಸೇರಿದಂತೆ ರೈತರು ಬೆಳೆಯುವ ಎಲ್ಲಾ ಬೆಳೆಗಳಿಗೆ ಬೆಂಬಲ ಬೆಲೆ ನೀಡಿ ಖರೀದಿಸಬೇಕು ಹಾಗೂ ರಾಜ್ಯ ಸರ್ಕಾರ ಕೂಡಲೇ ಖರೀದಿ ಕೇಂದ್ರ ಆರಂಭಿಸಬೇಕು ಎಂದು ಒತ್ತಾಯಿಸಿ ಅವಳಿ ಭಾರತೀಯ ಕಿಸಾನ್ ಸಂಘದಿಂದ ಸೋಮವಾರ ಪ್ರತಿಭಟಿಸಿ ತಹಶಿಲ್ದಾರರಿಗೆ ಮನವಿ ಸಲ್ಲಿಸಿದರು. ಮನವಿಯಲ್ಲಿ ಸಿಂ.ಏ.ನೀ.ಯೋಜನೆ ಸಂತ್ರಸ್ತರಿಗೆ ಪರಿಹಾರ, ನಿರಂತರ ವಿದ್ಯುತ್ , 3 ಸೇಂಟ್ಸ್ ನಿಂದ 20 ರವರೆಗೆ ನೋಂದಣಿಗೆ ಸೇರಿದಂತೆ ರೈತ ರ ನಾನಾ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿದರು. ಸಂಘದ ಅಧ್ಯಕ್ಷ ವಿ.ಬಿ.ಕೊಟ್ರೇಶ ಮಾತನಾಡಿಜಾನುವಾರು ಗಳಿಗೆ ಮುಂಜಾಗ್ರತಾ ಕ್ರಮ ಲಸಿಕೆಯನ್ನು ನೀಡಬೇಕು ಜತೆಗೆ ಸಕಾಲಕ್ಕೆ ಬಿತ್ತನೆ ಬೀಜ, ಗೊಬ್ಬರ ಪೂರೈಕೆ ಮಾಡಬೇಕು ಎಂದು ಆಗ್ರಹಿಸಿದರು.ಇದೇ ವೇಳೆ ಚಿಕ್ಕ ವೀರ್ಪ, ಬಿ.ಅಂಜಿನಪ್ಪ, ಶಿವಪ್ರಕಾಶ್, ಮಾರ್ಪ, ಕಡಾರಿ ಚಂದ್ರ್ಪ, ಬೋವಿ ಹನುಮಂತಪ್ಪ, ಹುಲಗಪ್ಪ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 