ರೈತರ ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆಗೆ ಖರೀದಿ ಕೇಂದ್ರ ಆರಂಭಿಸಲು ಒತ್ತಾಯ
Demand to start a purchase center at a support price for the crops grown by farmers
ಹೂವಿನಹಡಗಲಿ 12 : ಮೆಕ್ಕೆಜೋಳ, ಭತ್ತ, ಸೇರಿದಂತೆ ರೈತರು ಬೆಳೆಯುವ ಎಲ್ಲಾ ಬೆಳೆಗಳಿಗೆ ಬೆಂಬಲ ಬೆಲೆ ನೀಡಿ ಖರೀದಿಸಬೇಕು ಹಾಗೂ ರಾಜ್ಯ ಸರ್ಕಾರ ಕೂಡಲೇ ಖರೀದಿ ಕೇಂದ್ರ ಆರಂಭಿಸಬೇಕು ಎಂದು ಒತ್ತಾಯಿಸಿ ಅವಳಿ ಭಾರತೀಯ ಕಿಸಾನ್ ಸಂಘದಿಂದ ಸೋಮವಾರ ಪ್ರತಿಭಟಿಸಿ ತಹಶಿಲ್ದಾರರಿಗೆ ಮನವಿ ಸಲ್ಲಿಸಿದರು. ಮನವಿಯಲ್ಲಿ ಸಿಂ.ಏ.ನೀ.ಯೋಜನೆ ಸಂತ್ರಸ್ತರಿಗೆ ಪರಿಹಾರ, ನಿರಂತರ ವಿದ್ಯುತ್ , 3 ಸೇಂಟ್ಸ್ ನಿಂದ 20 ರವರೆಗೆ ನೋಂದಣಿಗೆ ಸೇರಿದಂತೆ ರೈತ ರ ನಾನಾ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿದರು. ಸಂಘದ ಅಧ್ಯಕ್ಷ ವಿ.ಬಿ.ಕೊಟ್ರೇಶ ಮಾತನಾಡಿಜಾನುವಾರು ಗಳಿಗೆ ಮುಂಜಾಗ್ರತಾ ಕ್ರಮ ಲಸಿಕೆಯನ್ನು ನೀಡಬೇಕು ಜತೆಗೆ ಸಕಾಲಕ್ಕೆ ಬಿತ್ತನೆ ಬೀಜ, ಗೊಬ್ಬರ ಪೂರೈಕೆ ಮಾಡಬೇಕು ಎಂದು ಆಗ್ರಹಿಸಿದರು.ಇದೇ ವೇಳೆ ಚಿಕ್ಕ ವೀರ್ಪ, ಬಿ.ಅಂಜಿನಪ್ಪ, ಶಿವಪ್ರಕಾಶ್, ಮಾರ್ಪ, ಕಡಾರಿ ಚಂದ್ರ್ಪ, ಬೋವಿ ಹನುಮಂತಪ್ಪ, ಹುಲಗಪ್ಪ ಇದ್ದರು.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 