ವೈಜ್ಞಾನಿಕ, ಸುರಕ್ಷಿತ ಮತ್ತು ನೈಸಗರ್ಿಕವಾಗಿ ಮಾವು ಮಾಗಿಸುವ ವಿಧಾನ ಪ್ರದರ್ಶನ
ಕೊಪ್ಪಳ 24: ಕೊಪ್ಪಳ ತೋಟಗಾರಿಕೆ ಇಲಾಖೆವತಿಯಿಂದ ವೈಜ್ಞಾನಿಕವಾಗಿ, ಸುರಕ್ಷಿತ ಮತ್ತು ನೈಸಗರ್ಿಕವಾಗಿ ಮಾವು ಮಾಗಿಸುವ ವಿಧಾನದ ಬಗ್ಗೆ ಪ್ರದರ್ಶನ ಮಾಡಲಾಯಿತು.
ಕೊಪ್ಪಳ ಜಿಲ್ಲೆಯಲ್ಲಿ ಸಾಮಾನ್ಯವಾಗಿ ಮಾವಿನಲ್ಲಿ ಹೂ ಕಚ್ಚಿದ ನಂತರ ತಳಿಗಳನ್ನಾಧರಿಸಿ 5 ತಿಂಗಳಿಗೆ ಕಟಾವಿಗೆ ಸಿದ್ಧವಾಗುತ್ತವೆ. ಕೆಲವು ಬೇಗ ಪಕ್ವವಾಗುವ ಹಣ್ಣುಗಳು ಮಾಚರ್್ನಲ್ಲಿ ಕಟಾವಿಗೆ ಬರುತ್ತವೆ. ಜಿಲ್ಲೆಯಲ್ಲಿ ಸಾಮಾನ್ಯವಾಗಿ ಬೆನೆಶಾನ್, ರಸಪುರಿ, ಕೇಸರ್ ಇವುಗಳು ಏಪ್ರೀಲ್, ಮೇ ಸುಮಾರಿಗೆ ಕಟಾವಿಗೆ ಬರುತ್ತವೆ. ತೋತಾಪೂರಿ ಮಲ್ಲಿಕಾ ಮೇ, ಜೂನ್ ನಂತರ ಕಟಾವಿಗೆ ಬರುತ್ತವೆ.
ಮಾವಿನ ಹಣ್ಣಿನ ತಳಿಗಳನ್ನಾಧರಿಸಿ ಮಾವು ಕಟಾವಿಗೆ ಬಂದಾಗ ಹಳದಿ ಬಣ್ಣಕ್ಕೆ ತಿರುಗುತ್ತವೆ ಮತ್ತು ಭುಜಗಳು ಹಳದಿಯಾಗಿ ಕಾಣುತ್ತವೆ. ಸೋನೆ ಕಡಿಮೆಯಾಗುತ್ತದೆ. 5ರಿಂದ 6 ಪಕ್ವಗೊಂಡ ಹಣ್ಣುಗಳು ಉದುರಿ ಕೆಳಗೆ ಬೀಳುತ್ತವೆ. ಪಕ್ವಗೊಂಡ ಕಾಯಿಗಳು ನೀರಿನಲ್ಲಿ ಮುಳುಗಿಸಿದಾಗ ಮುಳುಗುತ್ತವೆ.
ಹಣ್ಣು ಮಾಗಿಸುವ ವಿಧಾನ: ಚೆನ್ನಾಗಿ ಬಲಿತ ಕಾಯಿಗಳು ಕಟಾವಿನ ನಂತರ 4 ರಿಂದ 5 ದಿನಗಳಲ್ಲಿಯೇ ಹಣ್ಣಾಗುತ್ತವೆ. ಮಾವಿನಲ್ಲಿ ಸಹಜವಾಗಿ ಹಣ್ಣಾಗಲು ಸಮಯ ತಗಲುತ್ತದೆ. ಆದ್ದರಿಂದ ವೈಜ್ಞಾನಿಕವಾಗಿ, ಸುರಕ್ಷಿತವಾಗಿ ಮತ್ತು ನೈಸಗರ್ಿಕವಾಗಿ ಹಣ್ಣು ಮಾಗಿಸುವ ಮೂಲಕ ಉತ್ತಮ ಗುಣಮಟ್ಟ ಹಾಗೂ ಮಾರುಕಟ್ಟೆ ದೊರೆಯುತ್ತದೆ.
ಹಣ್ಣು ಮಾಗುವಾಗ ತೊಟ್ಟಿನ ಬುಡದಲ್ಲಿ ಇಥಲೀನ್ ಎಂಬ ರಾಸಾಯನಿಕ ಉತ್ಪತ್ತಿಯಾಗಿ ಆಮ್ಲಗಳು ವಿಭಜನೆಯಾಗಿ ಸಕ್ಕರೆಯಾಗಿ ರೂಪಾಂತರಗೊಳ್ಳುತ್ತವೆ. ಇದರಿಂದ ಹಣ್ಣಿನಲ್ಲಿ ತಳಿ ಆಧರಿಸಿ ಮಧುರವಾದ ಸುವಾಸನೆ ಬರುತ್ತದೆ, ಕಾಯಿಗಳನ್ನು ಕಟಾವಿನ ನಂತರ ಒಂದೆರೆಡು ಗಂಟೆಗಳ ಕಾಲ ನೆರಳಿನಲ್ಲಿಡಬೇಕು, ಸೋನೆ ಅಂಟಿಕೊಂಡಿದ್ದನ್ನು ಚೆನ್ನಾಗಿ ತೊಳೆದು ನಂತರ ಬಟ್ಟೆಯಿಂದ ಒರೆಸಿ ಪ್ಲಾಸ್ಟಿಕ್ ಕ್ರೇಟ್ಗಳಲ್ಲಿ ಸಂಗ್ರಹಿಸಬೇಕು, ಅನಂತರ 55 ಡಿಗ್ರಿ ಸೆಂಟಿಗ್ರೇಡ್ ಉಷ್ಣತೆಯ ಬಿಸಿ ನೀರಿನಲ್ಲಿ ಐದು ನಿಮಿಷಗಳ ಕಾಲ ಮುಳುಗಿಸಬೇಕು. ಅನಂತರ ಬಟ್ಟೆಯಿಂದ ಒರೆಸಬೇಕು. ಇದರಿಂದಾಗಿ ತೊಟ್ಟಿನ ಬುಡ ಕೊಳೆಯುವ ರೋಗ ನಿಯಂತ್ರಿಸಬಹುದು. ಸಿಪ್ಪೆಯ ಅಡಿಯಲ್ಲಿ ಹಣ್ಣಿನ ನೊಣ ಮೊಟ್ಟೆ ಇಟ್ಟಿದ್ದರೂ ನಾಶವಾಗುತ್ತದೆ, ಒಣಗಿದ ಕಾಯಿಗಳನ್ನು ಪ್ಲಾಸ್ಟಿಕ್ ಬುಟ್ಟಿಯಲ್ಲಿ ತಲೆ ಕೆಳಗಾಗಿ ಇಟ್ಟು ಮೇಲೆ ಭತ್ತದ ಹುಲ್ಲು ಅಥವಾ ಪೇಪರ್ ಚೂರುಗಳನ್ನು ಹರಡಬೇಕು.
ಎಷ್ಟೇಷ್ಟು ದಿನಗಳಲ್ಲಿ ಹೇಗೆ ಮಾಗಿಸುವುದು: ಹೀಗೆ ಶೇಖರಿಸಿದ ಕಾಯಿಗಳು 4ರಿಂದ 5 ದಿನಗಳಲ್ಲಿ ಹಣ್ಣಾಗುತ್ತದೆ, ಮಾವಿನ ಕಾಯಿಗಳ ಜೊತೆಗೆ 4ರಿಂದ 5 ಬಾಳೆ ಹಣ್ಣುಗಳನ್ನು ಇಟ್ಟರೆ ಬೇಗ ಹಣ್ಣಾಗುವುದು. ಸ್ವಲ್ಪ ಎಳೆ ಕಾಯಿಗಳನ್ನು ಕೊಯ್ದಿದ್ದರೆ ಬುಟ್ಟಿಯಲ್ಲಿ ಸಂಗ್ರಹಿಸುವ ಮೊದಲು 10 ಲೀಟರ್ ನೀರಿಗೆ 1 ರಿಂದ 2 ಮಿ.ಲೀ. ಇಥಲೀನ್ ದ್ರಾವಣ ಬೆರೆಸಿಕೊಂಡು ಕಾಯಿಗಳನ್ನು 5ರಿಂದ 10 ಸೆಕೆಂಡು ಮುಳುಗಿಸಿ ತೆಗೆಯಿರಿ. ಅನಂತರ ಬುಟ್ಟಿಯಲ್ಲಿ ಹರಡಿಕೊಳ್ಳಿ, ಪ್ಲಾಸ್ಟಿಕ್ ಕ್ರೇಟ್ಗಳಲ್ಲಿ ಸಂಗ್ರಹಿಸಿದ ಹಣ್ಣುಗಳನ್ನು ಶುದ್ಧ ಇಥಲೀನ್ ಅನಿಲ ಹಾಯಿಸಿ ಹಣ್ಣಾಗಿಸುವ ಕೊಠಡಿಗಳಲ್ಲಿ ಗಾಳಿಯಾಡದಂತೆ ಇಡಬೇಕು, ಬೆಂಗಳೂರಿನ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯು ಮಾವಿನ ಹಣ್ಣನ್ನು ಮಾಗಿಸುವ ತಂತ್ರಜ್ಞಾನವನ್ನು ಅಭಿವೃದ್ಧಿ ಪಡಿಸಿದೆ. 1 ಟನ್ ಅಥವಾ ಹೆಚ್ಚಿನ ಪ್ರಮಾಣದ ಹಣ್ಣುಗಳನ್ನು ಮಾಗಿಸಲು ಪಾಲಿಥೀನ್ ಕೊಠಡಿಗಳು ಲಭ್ಯವಿದ್ದು ಇವುಗಳಲ್ಲಿ ಹಣ್ಣುಗಳನ್ನು ಶೇಖರಿಸಿ ಇಥಲೀನ ದ್ರಾವಣ ಹಾಯಿಸುವುದರ ಮೂಲಕ ಹಣ್ಣುಗಳನ್ನು ಬೇಗನೆ ಮತ್ತು ಒಂದೇ ಸಮನಾಗಿ ಮಾಗಿಸಬಹುದು, ಗ್ರಾಮೀಣ ಭಾಗದಲ್ಲಿ ರೈತರು ಇವು ಯಾವು ಸೌಲಭ್ಯಗಳಿಲ್ಲದಿದ್ದಲ್ಲಿ ಪೂರ್ಣವಾಗಿ ಪಕ್ವಗೊಂಡ ಹಣ್ಣುಗಳನ್ನು ಗಾಳಿಯಾಡದ ಕೋಣೆಯಲ್ಲಿ ಒಂದೇ ಪದರಿನಲ್ಲಿ ಹರಡಿ ನೆಲ್ಲು ಹುಲ್ಲು ಹಾಕಿ ಮಾಗಲು ಬಿಟ್ಟರೆ ಒಂದೇ ವಾರದಲ್ಲಿ ಹಣ್ಣುಗಳು ಮಾಗುತ್ತವೆ.
ಸೂಚನೆ: ಯಾವುದೇ ಕಾರಣಕ್ಕೂ ಕ್ಯಾಲ್ಸಿಯಂ ಕಾಬ್ರೈಡ್ನಂತಹ ಹಾನಿಕಾರಕ ರಾಸಾಯನಿಕಗಳನ್ನು ಬಳಸಿ ಹಣ್ಣುಗಳನ್ನು ಮಾಗಿಸಬಾರದು. ಇದು ಕಾನೂನು ಬಾಹಿರವಾಗಿದ್ದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಸೂಚನೆ ನೀಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ತೋಟಗಾರಿಕೆ ಉಪನಿದರ್ೇಶಕರ ಕಛೇರಿ ದೂ.ಸಂ. 08539231530, ಕೊಪ್ಪಳ ತೋಟಗಾರಿಕೆ ಇಲಾಖೆ ವಿಷಯ ತಜ್ಞರು ಮೊ.ಸಂ. 9482672039 ಹಾಗೂ ಆಯಾ ತಾಲ್ಲೂಕಾ ತೋಟಗಾರಿಕೆ ಕಚೇರಿಗಳನ್ನು ಭೇಟಿ ನೀಡಿ ಮಾಹಿತಿಯನ್ನು ಪಡೆಯಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 