ಕೃಷ್ಣಾ ತೀರದ ಜನರ ಸಂಕಷ್ಟಕ್ಕಿಲ್ಲ ಅಂತ್ಯ :ಭೀಕರ ಪ್ರವಾಹದ ಬಳಿಕ ಡೆಂಗ್ಯೂ, ಚಿಕುನ್ ಗುನ್ಯ ಭೀತಿ
ಯಾದಗಿರಿ: ಹೈದರಾಬಾದ್ ಕರ್ನಾ ಟಕದ ಕೃಷ್ಣಾ ಹಾಗೂ ಭೀಮಾ ನದಿ ತೀರದ ಜನರ ಸಂಕಷ್ಟ ಸದ್ಯಕ್ಕೆ ಕೊನೆಗೊಳ್ಳುವಂತೆ ಕಾಣುತ್ತಿಲ್ಲ ಭೀಕರ ಪ್ರವಾಹದ ನಂತರ ಇದೀಗ ಚಿಕುನ್ ಗುನ್ಯ ಹಾಗೂ ಡೆಂಗ್ಯೂ ಭೀತಿ ಎದುರಾಗಿದೆ.
ಯಾದಗಿರಿಯಲ್ಲಿ ಈವರೆಗೂ 1521 ಶಂಕಿತ ಡೆಂಗ್ಯೂ ಜ್ವರ ಹಾಗೂ 912 ಶಂಕಿತ ಚಿಕುನ್ ಗುನ್ಯಾ ಪ್ರಕರಣಗಳು ದಾಖಲಾಗಿವೆ ರೋಗಿಗಳಿಗೆ ವಿವಿಧ ಆಸ್ಪತ್ರೆಗಳಲ್ಲಿ
ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಕರಣಗಳ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಸಕರ್ಾರಿ ಆಸ್ಪತ್ರೆಗಳ ವೈದ್ಯರು ಶಂಕೆ ವ್ಯಕ್ತಪಡಿಸಿದ್ದಾರೆ ಎಂದು ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಎಂ ಎಸ್ ಪಾಟೀಲ್ ಹೇಳಿದ್ದಾರೆ.
ಪ್ರವಾಹಪೀಡಿತ ಸ್ಥಳಗಳಿಗೆ ಆರೋಗ್ಯ ಇಲಾಖೆ ಕಾರ್ಯಕರ್ತರು ಭೇಟಿ ನೀಡಿ, ಜಠರದ ಉರಿ, ಟೈಫಾಯಿಡ್ ಹಾಗೂ ಇನ್ನಿತರ ಸಾಂಕ್ರಾಮಿಕ ಕಾಯಿಲೆಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ, "ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ನಾವು ಗರಿಷ್ಠ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದೇವೆ ಸಾಮಾನ್ಯವಾಗಿ ಪ್ರವಾಹದ ನೀರು ಕಡಿಮೆಯಾದ 15 ರಿಂದ 20 ದಿನಗಳ ನಂತರ ಸಾಂಕ್ರಾಮಿಕ ರೋಗ ಹರಡುತ್ತದೆ" ಎಂದು ಅವರು ಮಾಹಿತಿ ನೀಡಿದ್ದಾರೆ.
ಜನರು ಕಲುಷಿತ ನೀರನ್ನು ಕುಡಿಯುವವುದರಿಂದ ಇಂತಹ ಕಾಯಿಲೆಗಳಿಗೆ ಗುರಿಯಾಗಬೇಕಾಗುತ್ತದೆ ಹೀಗಾಗಿ ಕಾಯಿಸಿದ ನೀರನ್ನು ಕುಡಿಯಬೇಕು ಎಂದು ಜನರಲ್ಲಿ ವಿನಂತಿಸಿದ್ದೇವೆ ಎಂದು ಅವರು ತಿಳಿಸಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 