ಬೆಳಗಾವಿ: ಡೆಂಗ್ಯು ಜಾಗೃತಿ ಜಾಥಾ ಕಾರ್ಯಕ್ರಮ
ಲೋಕದರ್ಶನ ವರದಿ
ಬೆಳಗಾವಿ 03: "ಡೆಂಗ್ಯು ಜ್ವರ ಬಹಳ ಮಾರಕವಾಗಿದ್ದು, ಅದನ್ನು ತಡೆಗಟ್ಟಲು ಮುಂಜಾಗೃತಿ ಕ್ರಮ ಬಹಳ ಮುಖ್ಯವಾಗಿದೆ. ಅದನ್ನು ಬಹಳ ಮುತುವಜರ್ಿಯಿಂದ ಜಾಗೃತಿ ವಹಿಸಬೇಕು"ಎಂದು ಸ್ಥಳೀಯ ಬೆಳಗಾವಿ ಉತ್ತರ ಕ್ಷೇತ್ರ ಶಾಸಕರಾದ ಅನಿಲ ಬೆನಕೆ ಹೇಳಿದರು. ಅವರು ಸ್ಥಳೀಯ ಎಸ್ ಜಿ ವಿ ಮಹೇಶ ಪಿ ಯು ಕಾಲೇಜಿನಲ್ಲಿ ಡೆಂಗ್ಯು ಜ್ವರದ ಕುರಿತು ಜಾಗೃತಿ ಜಾಥಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. "ಜ್ವರ ಬಂದಮೇಲೆ ಜಾಗೃತಿ ವಹಿಸುವುದಕ್ಕಿಂತಲೂ ಬರುವ ಮೊದಲೇೆ ಮುತುವಜರ್ಿವಹಿಸುವುದು ಸೂಕ್ತ" ಎಂದು ಹೇಳಿದರು.
ಡೆಂಗ್ಯು ಜ್ವರದ ಕುರಿತು ಅಥಿತಿಗಳಾದ ಬಿಎಚ್ಎಂಎಸ್ ಕಾಲೇಜಿನ ಪ್ರಾಚಾರ್ಯ ಡಾ. ಆನಂದ ಹೊಸುರ ಮಾಹಿತಿ ನೀಡಿದರು. ಜಾಥಾದಲ್ಲಿ ಸುಮಾರು 750 ವಿದ್ಯಾಥರ್ಿಗಳು ಭಾಗವಹಿಸಿದ್ದರು. ಪ್ರಾಚಾರ್ಯ ಎಂ ವಿ ಭಟ್ಟ ಉಪಸ್ಥಿತರಿದ್ದರು. ಉಪಪ್ರಾಚಾರ್ಯ ಆನಂದ ಖೋತ ಸ್ವಾಗತಿಸಿದರು. ಉಪನ್ಯಾಸಕ ರಾಜು ಭಟ್ಟ ನಿರ್ವಹಿಸಿದರು. ಡೆಂಗ್ಯು ಜಾಗೃತಿಯ ಕುರಿತು ಘೋಷಣೆ ಮತ್ತು ಬಿತ್ತಿ ಪತ್ರ ಹಂಚಲಾಯಿತು.ಜಾಥಾದಲ್ಲಿ ಕಾಲೇಜಿನ ಉಪನ್ಯಾಸಕರು ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 