ಡೆಂಗ್ಯೂ ಜ್ವರ ನಿಯಂತ್ರಣ ಸಮೀಕ್ಷೆ ವಿಶೇಷ ಕಾರ್ಯಕ್ರಮ
ಬಳ್ಳಾರಿ,ಜು.04: ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಬಳ್ಳಾರಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಶನಿವಾರ ಡೆಂಗ್ಯೂ ಜ್ವರ ನಿಯಂತ್ರಣ ಸಮೀಕ್ಷೆಯನ್ನು ನಗರದ ವಿವಿಧ ಪ್ರದೇಶಗಳಲ್ಲಿ ಹಮ್ಮಿಕೊಳ್ಳಲಾಯಿತು.
ಸಮೀಕ್ಷೆಯನ್ನು ಸ್ವಯಂ ಸೇವಕರ ಜೊತೆ ಆಶಾ ಕಾರ್ಯಕತರ್ೆಯರು ಪ್ರತಿ ಮನೆ ಮನೆಗೆ ಹೋಗಿ ಅವರು ಸಂಗ್ರಹಿಸಿದ್ದ ನೀರಲ್ಲಿ ಲಾರ್ವ ಇರುವ ನೀರನ್ನು ಚೆಲ್ಲಿಸಿ ಪ್ರತಿ ಮನೆಯಲ್ಲಿ ಡೆಂಗ್ಯೂ ಜ್ವರ ಹೇಗೆ ತಡೆಗಟ್ಟಬೇಕೆಂದು ವಿವರವಾಗಿ ತಿಳಿಸಿದರು. ವಿವಿಧ ತೆಗ್ಗು ಪ್ರದೇಶಗಳಾದ ನಾಲಾಗಡ್ಡ, ಕೇಸರಿ ಬೀದಿ, ಗ್ವಾಲರಹಟ್ಟಿ, ಲಾಲಾಕಮಾನ್ ಪ್ರದೇಶದ ಮನೆಗಳಲ್ಲಿ ಸಂಗ್ರಹಿಸಿದ್ದ ನೀರಿನಲ್ಲಿ ಲಾರ್ವ ಕಂಡುಬಂದ ಕಾರಣ ಔಷಧಿಯನ್ನು ಹಾಕಿ ಡೆಂಗ್ಯೂ ಸೊಳ್ಳೆಗಳು ಹೇಗೆ ನಾಶ ಹೊಂದುತ್ತವೆ ಎಂದು ಮನೆಯ ಜನರಿಗೆ ತಿಳಿಸಿದರು. ಮನೆಗಳಲ್ಲಿ ಹೆಚ್ಚುದಿನಗಳವರೆಗೆ ನೀರನ್ನು ಸಂಗ್ರಹಿಸಬಾರದು ಎಂದು ಜನರಿಗೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಆರೋಗ್ಯ ಅಧಿಕಾರಿಗಳಾದ ಡಾ.ಅಬ್ದುಲ್ಲಾ, ಡಾ.ಕರುಣ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದಶರ್ಿ ಎಂ.ಎ.ಷಕೀಬ್, ಸೀನಿಯರ್ ಲ್ಯಾಬ್ ಟೆಕ್ನೀಶಿಯನ್ ನಂದಾರೆಡ್ಡಿ, ಶಶಿಧರ್ ಮೂತರ್ಿ, ಜಿಲ್ಲಾ ಕನ್ಸಲ್ಟಟೆಂಟ್ ಶಿಕ್ಷಾಣಾಧಿಕಾರಿ ಪ್ರತಾಪ್, ಸಂಯೋಜಕರಾದ ನಿಸಾರ್ ಅಹಮ್ಮದ್, ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಆಶಾ ಕಾರ್ಯಕತರ್ೆಯರು, ಆರೋಗ್ಯ ಸಹಾಯಕರು ಹಾಗೂ ರೆಡ್ಕ್ರಾಸ್ ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 