ಹೊಗೆ ಮಿಶ್ರಿತ ದಟ್ಟ ಮಂಜು: ವಾಹನ ಸವಾರರ ಪರದಾಟ
Dense fog mixed with smoke: Motorists struggle
ಬೆಟಗೇರಿ 08: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಹಾಗೂ ಸುತ್ತಲಿನ ಹಳ್ಳಿಗಳಲ್ಲಿ ಕಳೆದ ಎರಡು ದಿನಗಳಿಂದ ಬೆಳಗ್ಗೆ ಸುಮಾರು ಎರಡ್ಮೂರು ಗಂಟೆಗಳ ಕಾಲ ರಸ್ತೆಯ ಅಕ್ಕ-ಪಕ್ಕ, ಎದುರುಗಡೆ ಬರುವ ವಾಹನ, ಪಾದಚಾರಿಗಳು ಕಾಣದ ಹಾಗೇ ಹೊಗೆ ಮಿಶ್ರಿತ ನೀರು ಮಂಜು ಬಿಳುತ್ತಿರುವದರಿಂದ ವಾಹನ ಸವಾರರಿಗೆ ಮತ್ತು ಇಲ್ಲಿಯ ರೈತರಿಗೆ ಆತಂಕ ಎದುರಾಗಿದೆ.
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಹಾಗೂ ಸುತ್ತಲಿನ ಹಳ್ಳಿಗಳಲ್ಲಿ ಶನಿವಾರ ನ.8ರಂದು ಬೆಳಗ್ಗೆ 6ಗಂಟೆಯಿಂದ 8 ಗಂಟೆವರೆಗೆ ಹೊಗೆ ಮಿಶ್ರಿತ ನೀರು ಮಂಜು ಬಿದ್ದಿದ್ದರಿಂದ ಇಲ್ಲಿಯ ಮುಖ್ಯ ರಸ್ತೆಗಳ ಮೇಲೆ ಸಂಚರಿಸುವ ದ್ವಿಚಕ್ರ ವಾಹನ ಸೇರಿದಂತೆ ವಿವಿಧ ವಾಹನ ಚಾಲಕರು ಮುಂದೆ ಸಾಗಲು ದಾರಿ ಕಾಣದೇ ಹರಸಾಹಸ ಮಾಡುವಂತಾಗಿತ್ತು.
ಒಂದಡೆ ಇಲ್ಲಿಯ ರಸ್ತೆಗಳ ಮೇಲೆ ವಾಹನ ಸವಾರರು ಜೀವಭಯದಲ್ಲಿ ಓಡಾಡುವ ದುಸ್ಥಿತಿ ಎದುರಾದರೆ, ಇನ್ನೂಂದಡೆ ಮಂಜು ಆವರಿಸುತ್ತಿವುದರಿಂದ ಭೂಮಿಯಲ್ಲಿದ್ದ ಕೆಲವು ಬೆಳೆಗಳು ಹಾಗೂ ಕೆಲವು ತೋಟಗಾರಿಕೆ ಬೆಳೆಗಳು ಹಾಳಾಗುವ ಆತಂಕದ ಪರಿಸ್ಥಿತಿ ಸ್ಥಳೀಯ ರೈತರನ್ನು ಚಿಂತಿತರನ್ನಾಗಿಸಿದೆ.
ಕಳೆದ ಎರಡ್ಮೂರು ವರ್ಷಗಳಿಂದ ಒಂದಿಲ್ಲೊಂದು ಪ್ರಕೃತಿ ವಿಕೂಪಕ್ಕೆ ರೈತರು ತುತ್ತಾಗಿ ಸಂಕಷ್ಟದ ಪರಿಸ್ಥಿತಿ ಎದುರಿಸುವಂತಾಗಿದೆ. ಹೊಗೆ ಅಥವಾ ನೀರಿನ ಮಂಜು ನಿತ್ಯ ಹೀಗೆಯೇ ಬೀಳುವುದರಿಂದ ತೋಟಗಾರಿಕೆ ಕೆಲವು ಬೆಳೆಗಳ ಹೂವು ಕಾಯಿ ಹಿಡಿಯದೇ ಕತ್ತರಿಸಿ ನೆಲಕ್ಕೆ ಬಿದ್ದು ಬೆಳೆಗಳು ಪೂರ್ಣ ಹಾಳಾಗುತ್ತವೆ. ಇದಕ್ಕೆ ಸಂಬಂಧಿಸಿದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು ರೈತರಿಗೆ ಮುಂಜಾಗ್ರತ ಕ್ರಮಗಳ ಕುರಿತು ಮಾಹಿತಿ ನೀಡಬೇಕು ಅಂಬುವುದು ಸ್ಥಳೀಯರ ಒತ್ತಾಯವಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 