ಹೊಗೆ ಮಿಶ್ರಿತ ದಟ್ಟ ಮಂಜು: ವಾಹನ ಸವಾರರ ಪರದಾಟ
Dense fog mixed with smoke: Motorists struggle
ಬೆಟಗೇರಿ 08: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಹಾಗೂ ಸುತ್ತಲಿನ ಹಳ್ಳಿಗಳಲ್ಲಿ ಕಳೆದ ಎರಡು ದಿನಗಳಿಂದ ಬೆಳಗ್ಗೆ ಸುಮಾರು ಎರಡ್ಮೂರು ಗಂಟೆಗಳ ಕಾಲ ರಸ್ತೆಯ ಅಕ್ಕ-ಪಕ್ಕ, ಎದುರುಗಡೆ ಬರುವ ವಾಹನ, ಪಾದಚಾರಿಗಳು ಕಾಣದ ಹಾಗೇ ಹೊಗೆ ಮಿಶ್ರಿತ ನೀರು ಮಂಜು ಬಿಳುತ್ತಿರುವದರಿಂದ ವಾಹನ ಸವಾರರಿಗೆ ಮತ್ತು ಇಲ್ಲಿಯ ರೈತರಿಗೆ ಆತಂಕ ಎದುರಾಗಿದೆ.
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಹಾಗೂ ಸುತ್ತಲಿನ ಹಳ್ಳಿಗಳಲ್ಲಿ ಶನಿವಾರ ನ.8ರಂದು ಬೆಳಗ್ಗೆ 6ಗಂಟೆಯಿಂದ 8 ಗಂಟೆವರೆಗೆ ಹೊಗೆ ಮಿಶ್ರಿತ ನೀರು ಮಂಜು ಬಿದ್ದಿದ್ದರಿಂದ ಇಲ್ಲಿಯ ಮುಖ್ಯ ರಸ್ತೆಗಳ ಮೇಲೆ ಸಂಚರಿಸುವ ದ್ವಿಚಕ್ರ ವಾಹನ ಸೇರಿದಂತೆ ವಿವಿಧ ವಾಹನ ಚಾಲಕರು ಮುಂದೆ ಸಾಗಲು ದಾರಿ ಕಾಣದೇ ಹರಸಾಹಸ ಮಾಡುವಂತಾಗಿತ್ತು.
ಒಂದಡೆ ಇಲ್ಲಿಯ ರಸ್ತೆಗಳ ಮೇಲೆ ವಾಹನ ಸವಾರರು ಜೀವಭಯದಲ್ಲಿ ಓಡಾಡುವ ದುಸ್ಥಿತಿ ಎದುರಾದರೆ, ಇನ್ನೂಂದಡೆ ಮಂಜು ಆವರಿಸುತ್ತಿವುದರಿಂದ ಭೂಮಿಯಲ್ಲಿದ್ದ ಕೆಲವು ಬೆಳೆಗಳು ಹಾಗೂ ಕೆಲವು ತೋಟಗಾರಿಕೆ ಬೆಳೆಗಳು ಹಾಳಾಗುವ ಆತಂಕದ ಪರಿಸ್ಥಿತಿ ಸ್ಥಳೀಯ ರೈತರನ್ನು ಚಿಂತಿತರನ್ನಾಗಿಸಿದೆ.
ಕಳೆದ ಎರಡ್ಮೂರು ವರ್ಷಗಳಿಂದ ಒಂದಿಲ್ಲೊಂದು ಪ್ರಕೃತಿ ವಿಕೂಪಕ್ಕೆ ರೈತರು ತುತ್ತಾಗಿ ಸಂಕಷ್ಟದ ಪರಿಸ್ಥಿತಿ ಎದುರಿಸುವಂತಾಗಿದೆ. ಹೊಗೆ ಅಥವಾ ನೀರಿನ ಮಂಜು ನಿತ್ಯ ಹೀಗೆಯೇ ಬೀಳುವುದರಿಂದ ತೋಟಗಾರಿಕೆ ಕೆಲವು ಬೆಳೆಗಳ ಹೂವು ಕಾಯಿ ಹಿಡಿಯದೇ ಕತ್ತರಿಸಿ ನೆಲಕ್ಕೆ ಬಿದ್ದು ಬೆಳೆಗಳು ಪೂರ್ಣ ಹಾಳಾಗುತ್ತವೆ. ಇದಕ್ಕೆ ಸಂಬಂಧಿಸಿದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು ರೈತರಿಗೆ ಮುಂಜಾಗ್ರತ ಕ್ರಮಗಳ ಕುರಿತು ಮಾಹಿತಿ ನೀಡಬೇಕು ಅಂಬುವುದು ಸ್ಥಳೀಯರ ಒತ್ತಾಯವಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 