ಕನ್ನಡ, ಸಂಸ್ಕೃತಿ ಇಲಾಖೆ ಸಚಿವ ರವಿಯವರಿಗೆ ಜಿಲ್ಲಾ ಕ.ಸಾ.ಪದಿಂದ ಮನವಿ
ಲೋಕದರ್ಶನ ವರದಿ
ಗದಗ: ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಸಚಿವರಾದ ಸಿ.ಟಿ.ರವಿಯವರಿಗೆ ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ. ಶರಣು ಗೋಗೇರಿ ಯವರ ನೇತೃತ್ವದಲ್ಲಿ ಗದಗ ಜಿಲ್ಲೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕಾ ಸಾಹಿತ್ಯ ಭವನಗಳ ನಿರ್ಮಾಣ ಅನುದಾನ ಮಂಜೂರು ಮಾಡಲು ಮನವಿ ಸಲ್ಲಿಸಲಾಯಿತು.
ಜಿಲ್ಲಾಡಳಿತ ಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಸಚಿವರಾದ ಸಿ.ಟಿ.ರವಿ ಯವರಿಗೆ ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಯೋಗದ ಮೂಲಕ ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿರುವ ಸಾಹಿತ್ಯ ಭವನದ ಮುಂದುವರೆದ ಕಾಮಗಾರಿ, ಲಕ್ಷ್ಮೇಶ್ವರದಲ್ಲಿರುವ ಕನ್ನಡ ಸಾಹಿತ್ಯ ಭವನದ ಮುಂದುವರೆದ ಕಾಮಗಾರಿ ಹಾಗೂ ಮುಂಡರಗಿಯಲ್ಲಿರುವ ಕನ್ನಡ ಸಾಹಿತ್ಯ ಭವನಗಳ ನಿರ್ಮಾಣಕ್ಕೆ ತಲಾ 20 ಲಕ್ಷ ರೂಗಳಂತೆ ಒಟ್ಟು 60 ಲಕ್ಷ ರೂ ಮಂಜೂರು ಮಾಡಲು ಮನವಿ ಸಲ್ಲಿಸಲಾಯಿತು.
ಸಚಿವರನ್ನು ಇದೇ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸನ್ಮಾನಿಸಲಾಯಿತು. ಸಚಿವರನ್ನು ಭೇಟಿಯಾದ ನಿಯೋಗದಲ್ಲಿ ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಶರಣು ಗೋಗೇರಿ , ಮಾಜಿ ಅಧ್ಯಕ್ಷರಾದ ಕೆ.ಬಿ.ತಳಗೇರಿ, ಅಂದಾನೆಪ್ಪ ವಿಭೂತಿ, ಗೌರವ ಕಾರ್ಯದರ್ಶಿಗಳಾದ ಪ್ರಕಾಶ ಮಂಗಳೂರ, ಅಶೋಕ ಹಾದಿ, ಸಹ ಕಾರ್ಯದಶರ್ಿಗಳಾದ ಸಿ.ಕೆ.ಕೇಸರಿ, ರತ್ನಕ್ಕ ಪಾಟೀಲ, ರಾಜಕುಮಾರ ಸೊಪ್ಪಡ್ಲ, ಮೊದಲಾದವರು ಉಪಸ್ಥಿತರಿದ್ದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 