ಬ್ಯಾಂಕ್ ಗಳಲ್ಲಿ ಠೇವಣಿದಾರರ ಹಣ ಸಂಪೂರ್ಣ ಸುರಕ್ಷಿತ- ಹಣಕಾಸು ಸಚಿವರ ಭರವಸೆ
deposit
ನವದೆಹಲಿ, ಫೆ 1-ಷೆಡ್ಯೂಲ್ಡ್ ವಾಣಿಜ್ಯ ಬ್ಯಾಂಕುಗಳಲ್ಲಿ ಠೇವಣಿದಾರರ ಹಣ ಸಂಪೂರ್ಣ ಸುರಕ್ಷಿತವಾಗಿರಲಿದ್ದು, ಇದರ ಮೇಲ್ವಿಚಾರಣೆಗೆ ಬಿಗಿಯಾದ ಕಾರ್ಯವ್ಯವಸ್ಥೆ ಇದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
‘ಎಲ್ಲ ಷೆಡ್ಯೂಲ್ಡ್ ವಾಣಿಜ್ಯ ಬ್ಯಾಂಕ್ ಗಳ ವಾಣಿಜ್ಯ ವಹಿವಾಟು ಮತ್ತು ಅವುಗಳ ಸ್ಥಿತಿಯನ್ನು ಮೇಲ್ವಿಚಾರಣೆ ಸೂಕ್ತ ಕಾರ್ಯ ವ್ಯವಸ್ಥೆ ಜಾರಿಯಲ್ಲಿದ್ದು, ಠೇವಣಿದಾರರ ಹಣ ಸಂಪೂರ್ಣವಾಗಿ ಸುರಕ್ಷಿತವಾಗಿದೆ.’ ಎಂದು ಶನಿವಾರ ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸಿ ಹೇಳಿದ್ದಾರೆ.
‘ತೆರಿಗೆದಾರರು ಯಾವುದೇ ರೀತಿಯ ಕಿರುಕುಳಕ್ಕೆ ಒಳಗಾಗದಿರುವಂತೆ ಕ್ರಮಗಳನ್ನು ತೆಗೆದುಕೊಳ್ಳಲು ಸರ್ಕಾರ ಬದ್ಧವಾಗಿದೆ.’ ಎಂದು ಸಚಿವರು ಪ್ರತಿಪಾದಿಸಿದ್ದಾರೆ.ಎಲ್ಐಸಿಯಲ್ಲಿ ಸ್ವಲ್ಪ ಭಾಗವನ್ನು ಐಪಿಒ ಮೂಲಕ ಮಾರಾಟ ಮಾಡಲಾಗುವುದು. ಎನ್ಬಿಎಫ್ಸಿ ಮತ್ತು ಗೃಹ ಹಣಕಾಸು ನಿಗಮಗಳ ನಗದು ಸಮಸ್ಯೆಗಳನ್ನು ನಿವಾರಿಸಲು ಕಾರ್ಯವ್ಯವಸ್ಥೆ ರೂಪಿಸಲಾಗುವುದು. ಠೇವಣಿ ವಿಮೆ ಮತ್ತು ಸಾಲ ಖಾತರಿ ನಿಗಮಕ್ಕೆ ಠೇವಣಿ ವಿಮಾ ರಕ್ಷಣೆಯನ್ನು ಸದ್ಯದ ಒಂದು ಲಕ್ಷ ರೂ.ನಿಂದ 5 ಲಕ್ಷ ರೂ.ಗೆ ಹೆಚ್ಚಿಸಲು ಅನುಮತಿ ನೀಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 