ಉಪಅರಣ್ಯ ಸಂರಕ್ಷಣಾಧಿಕಾರಿ ನಾಯ್ಕವಾಡಿ ಸಾವು

ಉಪಅರಣ್ಯ ಸಂರಕ್ಷಣಾಧಿಕಾರಿ ನಾಯ್ಕವಾಡಿ ಸಾವು  Deputy Conservator of Forest Naikwadi passed away

ಬೆಳಗಾವಿ 07: ಜಿಲ್ಲೆಯ ಗೋಕಾಕ್ ತಾಲೂಕಿನ ಘಟಪ್ರಭಾ ಉಪವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ರಾಯಬಾಗ ತಾಲೂಕಿನ ಬ್ಯಾಕೋಡ ಗ್ರಾಮದ ನಿವಾಸಿ ಶಿವಾನಂದ ನಾಯ್ಕವಾಡಿ(42) ಅವರು ಸೋಮವಾರ ಬೆಳಗಿನ ಜಾವ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 

ಶಿವಾನಂದ ನಾಯ್ಕವಾಡಿ ಅವರು ಕಳೆದ ಎರಡು ದಿನಗಳಿಂದ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಸೋಮವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ಅವರನ್ನು ಬಳ್ಳಾರಿ ಡಿಎಫ್‌ಒ ಆಗಿ ವರ್ಗಾಯಿಸಲಾಗಿತ್ತು. ಆದರೆ ಇಂದು ಅವರು ನಿಧನ ಹೊಂದಿದ್ದಾರೆ. ಈ ಘಟನೆ ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.