ಗೂಗಿಕಟ್ಟೆಯಲ್ಲಿರುವ ರಂಗಮಂದಿರದ ಕಟ್ಟಡಕ್ಕೆ ಉಪಸಭಾಧ್ಯಕ್ಷ ರುದ್ರ್ಪ ಮಾನಪ್ಪ ಲಮಾಣಿ ಭೇಟಿ
Deputy Speaker Rudrapa Manappa Lamani visits the theatre building in Googikatte
ಹಾವೇರಿ 30: ನಗರದ ಜೆಪಿ ಸರ್ಕಲ್ ಹತ್ತಿರದ ಗೂಗಿಕಟ್ಟೆಯಲ್ಲಿರುವ ರಂಗಮಂದಿರದ ಕಟ್ಟಡಕ್ಕೆ ಉಪಸಭಾಧ್ಯಕ್ಷ ರುದ್ರ್ಪ ಮಾನಪ್ಪ ಲಮಾಣಿ ಭೇಟಿ ನೀಡಿ ಪರೀಶೀಲನೆ ನಡೆಸಿದರು.ಹಲವು ದಿನಗಳಿಂದ ರಂಗಮಂದಿರದ ಕಟ್ಟಡದಲ್ಲಿ ಯಾವುದೇ ಚಟುವಟಿಕೆಗಳು ನಡೆಯದೆ ಇರುವುದರಿಂದ ಈ ಕಟ್ಟಡ ಪಾಳು ಬಿದ್ದಂತಾಗಿದೆ ಕೂಡಲೇ ಈ ಕಟ್ಟಡದ ನಿರ್ವಹಣೆಯನ್ನು ಖಾಸಗಿ ಅವರಿಗೆ ನೀಡಿ ರಂಗಮಂದಿರದ ರಂಗಮಂದಿರದ ನಿರ್ವಹಣೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.ಕಟ್ಟಡದ ಪ್ರತಿಯೊಂದು ಮೂಲೆಯನ್ನು ಪರೀಶೀಲಿಸಿದ ಉಪಸಭಾಧ್ಯಕ್ಷ ರುದ್ರ್ಪ ಲಮಾಣಿ ಕಟ್ಟಡಕ್ಕೆ ಬೇಕಾದ ಅಗತ್ಯ ಮೂಲಭೂತ ಒದಗಿಸಲು ನನ್ನ ಅನುದಾನದಲ್ಲಿ ಹೆಚ್ಚಿನ ಅನುದಾನ ನೀಡುತ್ತೇನೆ .
ಕೂಡಲೇ ಕಟ್ಟಡದ ಕಾಮಗಾರಿಯನ್ನು ವೈಜ್ಞಾನಿಕವಾಗಿ ಮರುಪರೀಶೀಲಿಸಿ ಸಿದ್ಧಗೊಳಿಸುವಂತೆ ತಿಳಿಸಿದರು.ಯಾರೋ ಕಿಡಿಗೇಡಿಗಳಿಂದ ರಂಗಮಂದಿರದ ಕಟ್ಟಡದ ಗ್ಲಾಸ್ ಪುಡಿಪುಡಿ ಆಗಿರುವುದನ್ನು ಗಮನಿಸಿದ ಉಪಸಭಾಧ್ಯಕ್ಷರು ಕೂಡಲೇ ಇದನ್ನು ಸ್ವಚ್ಛಗೊಳಿಸಿ ಮುಂದೆ ಈ ರೀತಿ ಕಟ್ಟಡ ಹಾಳಾಗದಂತೆ ಎಚ್ಚರಿಕೆ ವಹಿಸುವಂತೆ ಅಧಿಕಾರಗಳಿಗೆ ತಾಕೀತು ಮಾಡಿದರು. ಈ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಂಎಂ ಮೈದೂರ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಮಹೇಶ ಕಲಾಲ ಸೇರಿದಂತೆ ಇತರ ಅಧಿಕಾರಿಗಳು ಹಾಜರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 