ಗೂಗಿಕಟ್ಟೆಯಲ್ಲಿರುವ ರಂಗಮಂದಿರದ ಕಟ್ಟಡಕ್ಕೆ ಉಪಸಭಾಧ್ಯಕ್ಷ ರುದ್ರ್ಪ ಮಾನಪ್ಪ ಲಮಾಣಿ ಭೇಟಿ
Deputy Speaker Rudrapa Manappa Lamani visits the theatre building in Googikatte
ಹಾವೇರಿ 30: ನಗರದ ಜೆಪಿ ಸರ್ಕಲ್ ಹತ್ತಿರದ ಗೂಗಿಕಟ್ಟೆಯಲ್ಲಿರುವ ರಂಗಮಂದಿರದ ಕಟ್ಟಡಕ್ಕೆ ಉಪಸಭಾಧ್ಯಕ್ಷ ರುದ್ರ್ಪ ಮಾನಪ್ಪ ಲಮಾಣಿ ಭೇಟಿ ನೀಡಿ ಪರೀಶೀಲನೆ ನಡೆಸಿದರು.ಹಲವು ದಿನಗಳಿಂದ ರಂಗಮಂದಿರದ ಕಟ್ಟಡದಲ್ಲಿ ಯಾವುದೇ ಚಟುವಟಿಕೆಗಳು ನಡೆಯದೆ ಇರುವುದರಿಂದ ಈ ಕಟ್ಟಡ ಪಾಳು ಬಿದ್ದಂತಾಗಿದೆ ಕೂಡಲೇ ಈ ಕಟ್ಟಡದ ನಿರ್ವಹಣೆಯನ್ನು ಖಾಸಗಿ ಅವರಿಗೆ ನೀಡಿ ರಂಗಮಂದಿರದ ರಂಗಮಂದಿರದ ನಿರ್ವಹಣೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.ಕಟ್ಟಡದ ಪ್ರತಿಯೊಂದು ಮೂಲೆಯನ್ನು ಪರೀಶೀಲಿಸಿದ ಉಪಸಭಾಧ್ಯಕ್ಷ ರುದ್ರ್ಪ ಲಮಾಣಿ ಕಟ್ಟಡಕ್ಕೆ ಬೇಕಾದ ಅಗತ್ಯ ಮೂಲಭೂತ ಒದಗಿಸಲು ನನ್ನ ಅನುದಾನದಲ್ಲಿ ಹೆಚ್ಚಿನ ಅನುದಾನ ನೀಡುತ್ತೇನೆ .
ಕೂಡಲೇ ಕಟ್ಟಡದ ಕಾಮಗಾರಿಯನ್ನು ವೈಜ್ಞಾನಿಕವಾಗಿ ಮರುಪರೀಶೀಲಿಸಿ ಸಿದ್ಧಗೊಳಿಸುವಂತೆ ತಿಳಿಸಿದರು.ಯಾರೋ ಕಿಡಿಗೇಡಿಗಳಿಂದ ರಂಗಮಂದಿರದ ಕಟ್ಟಡದ ಗ್ಲಾಸ್ ಪುಡಿಪುಡಿ ಆಗಿರುವುದನ್ನು ಗಮನಿಸಿದ ಉಪಸಭಾಧ್ಯಕ್ಷರು ಕೂಡಲೇ ಇದನ್ನು ಸ್ವಚ್ಛಗೊಳಿಸಿ ಮುಂದೆ ಈ ರೀತಿ ಕಟ್ಟಡ ಹಾಳಾಗದಂತೆ ಎಚ್ಚರಿಕೆ ವಹಿಸುವಂತೆ ಅಧಿಕಾರಗಳಿಗೆ ತಾಕೀತು ಮಾಡಿದರು. ಈ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಂಎಂ ಮೈದೂರ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಮಹೇಶ ಕಲಾಲ ಸೇರಿದಂತೆ ಇತರ ಅಧಿಕಾರಿಗಳು ಹಾಜರಿದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 