ಜಾಮೀನು ಲಭಿಸಿದರೂ, ನೌಹಿರಾ ಶೇಖ್ ಗೆ ತಪ್ಪದ ಜೈಲು ವಾಸ
ಹೈದರಾಬಾದ್, ಜ ೧೮, ಹೀರಾ ಗ್ರೂಪ್ ಠೇವಣಿದಾರರ ಹಗರಣದಲ್ಲಿ ಹೈದ್ರಾಬಾದ್ ಪ್ರಕರಣದಲ್ಲಿ ನೌಹೀರಾ ಶೇಖ್ಗೆ ಜಾಮೀನು ಲಭಿಸಿದ್ದರೂ, ಜೈಲು ವಾಸದಿಂದ ವಿಮುಕ್ತಿ ದೊರಕಿಲ್ಲ ನಾಂಪಲ್ಲಿ ನ್ಯಾಯಾಲಯ ಜಾಮೀನು ಆದೇಶ ಮಂಜೂರು ಮಾಡಿದ ದಿನವೇ ಆಕೆಯನ್ನು ಮುಂಬೈ ಪೊಲೀಸರು ಬಂಧಿಸಿ ಆಕೆಯನ್ನು ಅಲ್ಲಿಗೆ ಕರೆದೊಯ್ದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.ಜಾಮೀನಿನ ಮೇಲೆ ಬಿಡುಗಡೆಗೆ ಅಕೆಯ ಪರ ವಕೀಲರು ಪ್ರಯತ್ನ ನಡೆಸಿದ್ದಾರೆ. ಈ ತಿಂಗಳ ಕೊನೆಯಲ್ಲಿ ಆಕೆ ಬಿಡುಗಡೆಗೊಳ್ಳುವ ಸಾಧ್ಯತೆಯಿದೆ ಎಂದು ವಕೀಲರು ತಿಳಿಸಿದ್ದಾರೆ. ಮಹಾರಾಷ್ಟ್ರದಲ್ಲೂ ಕೂಡ ಠೇವಣಿದಾರರನ್ನು ವಂಚಿಸಿದ ಆರೋಪ ನೌಹೀರಾ ಎದುರಿಸುತ್ತಿದ್ದಾರೆ. ನೌಹೀರಾ ಸಲ್ಲಿಸಿರುವ ಹೊಸ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂಬೈ ಹೈಕೋರ್ಟ್ ಈ ತಿಂಗಳ ೨೯ ಕ್ಕೆ ಮುಂದೂಡಿದೆ. ಜಾಮೀನು ನೀಡಿದರೆ ಸಂತ್ರಸ್ತ ಠೇವಣಿದಾರರ ಹಣ ವಾಪಸ್ಸು ನೀಡಲು ಕ್ರಮ ಕೈಗೊಳ್ಳುವುದಾಗಿ ನೌಹೀರಾ ಭರವಸೆ ನೀಡಿದರೂ ನ್ಯಾಯಾಲಯಕ್ಕೆ ಅದನ್ನು ಮನವರಿಕೆ ಮಾಡುವಲ್ಲಿ ಆಕೆ ವಿಫಲವಾಗಿದ್ದಾರೆ ಎಂದು ವರದಿಯಾಗಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 