ಜಾಮೀನು ಲಭಿಸಿದರೂ, ನೌಹಿರಾ ಶೇಖ್ ಗೆ ತಪ್ಪದ ಜೈಲು ವಾಸ
ಹೈದರಾಬಾದ್, ಜ ೧೮, ಹೀರಾ ಗ್ರೂಪ್ ಠೇವಣಿದಾರರ ಹಗರಣದಲ್ಲಿ ಹೈದ್ರಾಬಾದ್ ಪ್ರಕರಣದಲ್ಲಿ ನೌಹೀರಾ ಶೇಖ್ಗೆ ಜಾಮೀನು ಲಭಿಸಿದ್ದರೂ, ಜೈಲು ವಾಸದಿಂದ ವಿಮುಕ್ತಿ ದೊರಕಿಲ್ಲ ನಾಂಪಲ್ಲಿ ನ್ಯಾಯಾಲಯ ಜಾಮೀನು ಆದೇಶ ಮಂಜೂರು ಮಾಡಿದ ದಿನವೇ ಆಕೆಯನ್ನು ಮುಂಬೈ ಪೊಲೀಸರು ಬಂಧಿಸಿ ಆಕೆಯನ್ನು ಅಲ್ಲಿಗೆ ಕರೆದೊಯ್ದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.ಜಾಮೀನಿನ ಮೇಲೆ ಬಿಡುಗಡೆಗೆ ಅಕೆಯ ಪರ ವಕೀಲರು ಪ್ರಯತ್ನ ನಡೆಸಿದ್ದಾರೆ. ಈ ತಿಂಗಳ ಕೊನೆಯಲ್ಲಿ ಆಕೆ ಬಿಡುಗಡೆಗೊಳ್ಳುವ ಸಾಧ್ಯತೆಯಿದೆ ಎಂದು ವಕೀಲರು ತಿಳಿಸಿದ್ದಾರೆ. ಮಹಾರಾಷ್ಟ್ರದಲ್ಲೂ ಕೂಡ ಠೇವಣಿದಾರರನ್ನು ವಂಚಿಸಿದ ಆರೋಪ ನೌಹೀರಾ ಎದುರಿಸುತ್ತಿದ್ದಾರೆ. ನೌಹೀರಾ ಸಲ್ಲಿಸಿರುವ ಹೊಸ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂಬೈ ಹೈಕೋರ್ಟ್ ಈ ತಿಂಗಳ ೨೯ ಕ್ಕೆ ಮುಂದೂಡಿದೆ. ಜಾಮೀನು ನೀಡಿದರೆ ಸಂತ್ರಸ್ತ ಠೇವಣಿದಾರರ ಹಣ ವಾಪಸ್ಸು ನೀಡಲು ಕ್ರಮ ಕೈಗೊಳ್ಳುವುದಾಗಿ ನೌಹೀರಾ ಭರವಸೆ ನೀಡಿದರೂ ನ್ಯಾಯಾಲಯಕ್ಕೆ ಅದನ್ನು ಮನವರಿಕೆ ಮಾಡುವಲ್ಲಿ ಆಕೆ ವಿಫಲವಾಗಿದ್ದಾರೆ ಎಂದು ವರದಿಯಾಗಿದೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 