ಟೂರ್ನಿ ಯಲ್ಲಿ ಕಳಪೆ ಆರಂಭದ ಹೊರತಾಗಿಯೂ, ಪುಟಿದೆದ್ದವು: ರೋಹಿತ್ ಶರ್ಮಾ
ಮುಂಬೈ, ಮೇ ೬ ಸಂಘಟಿತ ಆಟದ ಫಲವಾಗಿ ಮಹತ್ವದ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು 9 ವಿಕೆಟ್ ಗಳಿಂದ ಮಣಿಸಲು ಸಾಧ್ಯವಾಯಿತು ಎಂದು ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶಮರ್ಾ ಅಭಿಪ್ರಾಯ ಪಟ್ಟಿದ್ದಾರೆ.
'ತಂಡದ ಪ್ರತಿಯೊಬ್ಬ ಆಟಗಾರ ಪಂದ್ಯದ ಸ್ಥಿತಿಯನ್ನೇ ಬದಲಿಸ ಬಲ್ಲ ಕ್ಷಮತೆ ಹೊಂದಿದ್ದಾರೆ. ಬೌಲರ್ ಗಳು ಕೆಕೆಆರ್ ತಂಡವನ್ನು 140 ರನ್ ಗಳಿಗಿಂತಲೂ ಕಡಿಮೆ ಮೊತ್ತಕ್ಕೆ ಕಟ್ಟಿ ಹಾಕಿದರು. ಕೋಲ್ಕತಾ ಇನ್ನಿಂಗ್ಸ್ ಆರಂಭಿಸಿದ ಧಾಟಿಯನ್ನು ನೋಡಿದರೆ, 180 ರನ್ ಆಗುತ್ತದೆ ಎಂದು ಅಂದು ಕೊಂಡಿದ್ದೆ. ಆದರೆ, ಬೌಲರ್ ಗಳು ಭರ್ಜರಿ ಪ್ರದರ್ಶನ ನೀಡಿದರು' ಎಂದು ರೋಹಿತ್ ಬೌಲರ್ ಗಳನ್ನು ಹೊಗಳಿದ್ದಾರೆ.
ಐಪಿಎಲ್ ನಲ್ಲಿ ಉತ್ತಮ ಆರಂಭ ನಮಗೆ ಲಭಿಸಿರಲಿಲ್ಲ. ನಂತರ ತಂಡ ಭರ್ಜರಿಯಾಗಿ ಪ್ರದರ್ಶನ ನೀಡಿ ಪುಟಿದೆದ್ದಿದೆ. ಎಲ್ಲ ಆಟಗಾರರು ತಮ್ಮ ಜವಾಬ್ದಾರಿ ಅರಿತು ಆಡಿದ್ದಾರೆ. ಮೂರು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದೇವೆ. ಆಗಲೂ ತಂಡದ ಕೊನೆಯಲ್ಲಿ ಸ್ಥಿರ ಪ್ರದರ್ಶನ ನೀಡಿತ್ತು. ಇನ್ನು ಕೆಲವು ವಿಭಾಗಗಳಲ್ಲಿ ಚೇತೋಹಾರಿ ಪ್ರದರ್ಶನ ನೀಡಿ, ನ್ಯೂನತೆಯನ್ನು ಮೆಟ್ಟಿ ನಿಲ್ಲುವ ವಿಶ್ವಾಸ ಇರೋದಾಗಿ ತಿಳಿಸಿದ್ದಾರೆ.
ಮುಂಬೈ ತಂಡ ಪ್ಲೇ ಆಫ್ ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕಾದಾಟ ನಡೆಸಲಿದೆ. ಈ ಪಂದ್ಯಕ್ಕೆ ಚೆನ್ನೈ ಆತಿಥ್ಯ ನೀಡಲಿದೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 