ದೇವೇಗೌಡರ ಹುಟ್ಟುಹಬ್ಬ : ಮಹಾರುದ್ರಾಭಿಷೇಕ ವಿಶೇಷ ಪೂಜೆ
Deve Gowda's birthday: Maharudrabhishek special puja
ಕೊಪ್ಪಳ 19: ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡರ 94ನೇ ಹುಟ್ಟು ಹಬ್ಬದ ಪ್ರಯುಕ್ತ ಬೆಳಿಗ್ಗೆ ಮಹಾಮಹಿಮ ಶ್ರೀ ಗವಿಸಿದ್ದೇಶ್ವರಗೆ ಮಹಾರುದ್ರಭಿಷೇಕ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ಜೆಡಿಎಸ್ ರಾಜ್ಯ ಕಾರ್ಯದರ್ಶಿ ವೀರೇಶ ಮಹಾಂತಯ್ಯನಮಠ ಮಾತನಾಡಿ ಮಾಜಿ ಪ್ರಧಾನಿ ದೇವೇಗೌಡರು 94ರ ಈ ವಯಸ್ಸಿನಲ್ಲಿಯೂ ಜನಹಿತಕ್ಕಾಗಿ ಸಂಘರ್ಷದ ಹಾದಿಯನ್ನು ಸವೆಸುತ್ತಿದ್ದಾರೆ,ಅವರ ದಾರಿ ತಲೆತಲೆಮಾರಿಗೂ ಮಾದರಿ ಆ ಹಿರಿಯ ಜೀವಕ್ಕೆ ಭಗವಂತ ಉತ್ತಮ ಆಯುರಾರೋಗ್ಯ ಕರುಣಿಸಿ, ಇನ್ನೂ ಸುದೀರ್ಘ ಕಾಲ ರಾಷ್ಟ್ರಸೇವೆ ಮಾಡುವ ಶಕ್ತಿ, ಚೈತನ್ಯ ನೀಡಲಿ ಎಂದು ಪ್ರಾರ್ಥಿಸಿದರು.ನಂತರ ಬೊಲ್ಡೊಟಾ ಹಠಾವು ಕೊಪ್ಪಳ ಬಚಾವ್ 200ನೇ ದಿನದ ಹೋರಾಟದಲ್ಲಿ ಭಾಗವಹಿಸಿ ರೈತರಿಗೆ ಸಿಹಿ ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಮಾಜಿ ತಾಲೂಕಾಧ್ಯಕ್ಷರಾದ ಅಯುಬ್ ಅಡ್ಡೆವಾಲೆ ಮುಖಂಡರಾದ ಮಂಜುನಾಥ್ ಸೊರಟೂರ್ ಬಸವರಾಜ್ ಕಲ್ಕೇರಿ ರಾಜು ಕೋರಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 