ದೇವೇಗೌಡರ ಹುಟ್ಟುಹಬ್ಬ : ಮಹಾರುದ್ರಾಭಿಷೇಕ ವಿಶೇಷ ಪೂಜೆ
Deve Gowda's birthday: Maharudrabhishek special puja
ಕೊಪ್ಪಳ 19: ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡರ 94ನೇ ಹುಟ್ಟು ಹಬ್ಬದ ಪ್ರಯುಕ್ತ ಬೆಳಿಗ್ಗೆ ಮಹಾಮಹಿಮ ಶ್ರೀ ಗವಿಸಿದ್ದೇಶ್ವರಗೆ ಮಹಾರುದ್ರಭಿಷೇಕ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ಜೆಡಿಎಸ್ ರಾಜ್ಯ ಕಾರ್ಯದರ್ಶಿ ವೀರೇಶ ಮಹಾಂತಯ್ಯನಮಠ ಮಾತನಾಡಿ ಮಾಜಿ ಪ್ರಧಾನಿ ದೇವೇಗೌಡರು 94ರ ಈ ವಯಸ್ಸಿನಲ್ಲಿಯೂ ಜನಹಿತಕ್ಕಾಗಿ ಸಂಘರ್ಷದ ಹಾದಿಯನ್ನು ಸವೆಸುತ್ತಿದ್ದಾರೆ,ಅವರ ದಾರಿ ತಲೆತಲೆಮಾರಿಗೂ ಮಾದರಿ ಆ ಹಿರಿಯ ಜೀವಕ್ಕೆ ಭಗವಂತ ಉತ್ತಮ ಆಯುರಾರೋಗ್ಯ ಕರುಣಿಸಿ, ಇನ್ನೂ ಸುದೀರ್ಘ ಕಾಲ ರಾಷ್ಟ್ರಸೇವೆ ಮಾಡುವ ಶಕ್ತಿ, ಚೈತನ್ಯ ನೀಡಲಿ ಎಂದು ಪ್ರಾರ್ಥಿಸಿದರು.ನಂತರ ಬೊಲ್ಡೊಟಾ ಹಠಾವು ಕೊಪ್ಪಳ ಬಚಾವ್ 200ನೇ ದಿನದ ಹೋರಾಟದಲ್ಲಿ ಭಾಗವಹಿಸಿ ರೈತರಿಗೆ ಸಿಹಿ ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಮಾಜಿ ತಾಲೂಕಾಧ್ಯಕ್ಷರಾದ ಅಯುಬ್ ಅಡ್ಡೆವಾಲೆ ಮುಖಂಡರಾದ ಮಂಜುನಾಥ್ ಸೊರಟೂರ್ ಬಸವರಾಜ್ ಕಲ್ಕೇರಿ ರಾಜು ಕೋರಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 