ಮಕ್ಕಳಲ್ಲಿ ಕ್ರೀಡಾಸಕ್ತಿ ಬೆಳೆಸಿ
ಲೋಕದರ್ಶನವರದಿ
ಗುಳೇದಗುಡ್ಡ18: ಬಾಲ್ಯದಿಂದಲೇ ಮಕ್ಕಳಲ್ಲಿ ಕ್ರೀಡೆ, ಕಲೆ, ಸಂಸ್ಕೃತಿ, ಪಠ್ಯ ಪೂರಕ ಚಟುವಟಿಕೆಗಳ ಕುರಿತು ಆಸಕ್ತಿ ಬೆಳೆಸಬೇಕು. ಮನೆಯಲ್ಲಿ ಪಾಲಕರು, ಶಾಲೆಯಲ್ಲಿ ಶಿಕ್ಷಕರು ಮಕ್ಕಳ ಕಲಿಕೆಗೆ ವಿಶೇಷ ಆಸಕ್ತಿ ಮೂಡಿಸಿದಾಗ ಮಾತ್ರ ಮಗು ಸರ್ವತೋಮುಖ ಬೆಳವಣಿಗೆ ಹೊಂದಲು ಸಾಧ್ಯ ಎಂದು ಮಾಹೇಶ್ವರಿ ವಿದ್ಯಾಪ್ರಚಾರಕ ಮಂಡಳದ ಅಧ್ಯಕ್ಷ, ಪುರಸಭೆ ಮಾಜಿ ಸ್ಥಾಯಿ ಸಮಿತಿ ಚೇರಮನ್ ಕಮಲಕಿಶೋರ ಮಾಪಲಾಣಿ ಹೇಳಿದರು.
ಅವರು ಶನಿವಾರ ಇಲ್ಲಿನ ಮಾಹೇಶ್ವರಿ ವಿದ್ಯಾಪ್ರಚಾರಕ ಮಂಡಳದ ಅಡಿಯಲ್ಲಿ ನಡೆಯುತ್ತಿರುವ ವೆಂಕಟೇಶ ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಎಲ್.ಕೆ.ಜಿ., ಯು.ಕೆ.ಜಿ. ಹಾಗೂ ನರ್ಸರಿ ಶಾಲೆಗಳ ವಾಷರ್ಿಕೋತ್ಸವ ಹಾಗೂ ಪಾಲಕರಿಗಾಗಿ ಹಮ್ಮಿಕೊಂಡ ವಿವಿಧ ಸ್ಪಧರ್ೆಗಳ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಶಾಲೆಯ ಮುಖ್ಯಗುರು ಬಿ.ಆರ್.ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದಶರ್ಿ ಗೋವಿಂದ ಬಜಾಜ, ಶಾಲೆಯ ಮಹಿಳಾ ಮಾರ್ಗದಶರ್ಿ ಲತಾಜಿ ತಾಪಡಿಯಾ, ರೂಪಾಲಿ ಮಂತ್ರಿ, ಸಂಪದಾ ಹಾಗೂ ಇತರರು ಇದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 